ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೀಶಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೋದರ ಮಾವ ಸಿಬಿಐ ವಶಕ್ಕೆ

Last Updated 12 ಡಿಸೆಂಬರ್ 2020, 15:44 IST
ಅಕ್ಷರ ಗಾತ್ರ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿಯನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಹಾಗೂ ಭೀಮಾ ತೀರದ ಧರ್ಮರಾಜ ಚಡಚಣ ಸಹಚರ ನಾಗಪ್ಪ ಎಂಬುವವರನ್ನು ವಿಜಯಪುರದಲ್ಲಿ ಬಂಧಿಸಿ ಇಲ್ಲಿನ ಉಪನಗರ ಠಾಣೆಗೆ ಕರೆತಂದಿದ್ದಾರೆ.

ಈಗಾಗಲೇ ಹಲವು ಬಾರಿ ಚಂದ್ರಶೇಖರ ಇಂಡಿ ಅವರನ್ನು ವಿಚಾರಣೆಗೆ ಒಳಪಡಿಸಿದ ತಂಡ, ಇದೀಗ ಅವರೊಂದಿಗೆ ಭೀಮಾ ತೀರದ ನಾಗಪ್ಪ ಎಂಬ ವ್ಯಕ್ತಿಯನ್ನೂ ಬಂಧಿಸಿರುವುದು ಕುತೂಹಲ ಕೆರಳಿಸಿದೆ. ಕೊಲೆ ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದೆನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT