<p><strong>ಧಾರವಾಡ:</strong> ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿ ಮನೋಹರ ಕೋಟಾರಗಸ್ತಿ (24) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೇಂದ್ರದ ಮರಕ್ಕೆ ನೇಣು ಹಾಕಿಕೊಂಡಿರುವ ಮನೋಹರ ಅವರು ವಿಜಯಪುರ ಸಿಂಧಗಿ ತಾಲ್ಲೂಕಿನ ಬೋರಗಿ ಗ್ರಾಮದವರು.</p>.<p>ಮನೋಹರ ಅವರು 23 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಆತ್ಮಹತ್ಯೆಗೆ ಪ್ರೀತಿಸಿದ ಹುಡುಗಿ ಮತ್ತು ತರಬೇತಿ ಶಾಲೆ ಪ್ರಾಂಶುಪಾಲ ಪರಾಶ್ವಟ್ಟಿ ಕಾರಣ ಎಂದಿದ್ದಾರೆ.</p>.<p>ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸ್ ಆಯುಕ್ತ ಎಮ್ ಎನ್ ನಾಗರಾಜ ಭೇಟಿ ನೀಡಿ ಮನೋಹರ ಸಹೋದರನಿಗೆ ಸಾಂತ್ವನ ಹೇಳಿದರು.</p>.<p>2018ನೆ ಬ್ಯಾಚ್ ನಲ್ಲಿ ತರಬೇತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದ ಮನೋಹರ ಅವರ ವಿರುಧ್ಧ ಪ್ರೇಮ ಪ್ರಕರಣದಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು.</p>.<p>ಈ ವಿಚಾರದಲ್ಲಿ ಇತನ ಬಗ್ಗೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು</p>.<p>ಈ ವೇಳೆ ಧಾರವಾಡದ ಕಲಘಟಗಿಯ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಕೊನೆಯ ತರಬೇತಿ ಪಡೆಯುತ್ತಿದ್ದ ಮನೋಹರ್ ಕೊಟರಗಸ್ತಿ ನಿನ್ನೆ ಮಧ್ಯರಾತ್ರಿ ತರಬೇತಿಯ ಆವರಣದಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪ್ರಂಶುಪಾಲ ಪಾರಶೆಟ್ಟಿ ಕಿರುಕುಳ ನೀಡುತ್ತಿದ್ದಾರೆಂಬ ವಿಚಾರ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿ ಮನೋಹರ ಕೋಟಾರಗಸ್ತಿ (24) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೇಂದ್ರದ ಮರಕ್ಕೆ ನೇಣು ಹಾಕಿಕೊಂಡಿರುವ ಮನೋಹರ ಅವರು ವಿಜಯಪುರ ಸಿಂಧಗಿ ತಾಲ್ಲೂಕಿನ ಬೋರಗಿ ಗ್ರಾಮದವರು.</p>.<p>ಮನೋಹರ ಅವರು 23 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಆತ್ಮಹತ್ಯೆಗೆ ಪ್ರೀತಿಸಿದ ಹುಡುಗಿ ಮತ್ತು ತರಬೇತಿ ಶಾಲೆ ಪ್ರಾಂಶುಪಾಲ ಪರಾಶ್ವಟ್ಟಿ ಕಾರಣ ಎಂದಿದ್ದಾರೆ.</p>.<p>ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.</p>.<p>ಸ್ಥಳಕ್ಕೆ ಪೊಲೀಸ್ ಆಯುಕ್ತ ಎಮ್ ಎನ್ ನಾಗರಾಜ ಭೇಟಿ ನೀಡಿ ಮನೋಹರ ಸಹೋದರನಿಗೆ ಸಾಂತ್ವನ ಹೇಳಿದರು.</p>.<p>2018ನೆ ಬ್ಯಾಚ್ ನಲ್ಲಿ ತರಬೇತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದ ಮನೋಹರ ಅವರ ವಿರುಧ್ಧ ಪ್ರೇಮ ಪ್ರಕರಣದಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು.</p>.<p>ಈ ವಿಚಾರದಲ್ಲಿ ಇತನ ಬಗ್ಗೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು</p>.<p>ಈ ವೇಳೆ ಧಾರವಾಡದ ಕಲಘಟಗಿಯ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಕೊನೆಯ ತರಬೇತಿ ಪಡೆಯುತ್ತಿದ್ದ ಮನೋಹರ್ ಕೊಟರಗಸ್ತಿ ನಿನ್ನೆ ಮಧ್ಯರಾತ್ರಿ ತರಬೇತಿಯ ಆವರಣದಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪ್ರಂಶುಪಾಲ ಪಾರಶೆಟ್ಟಿ ಕಿರುಕುಳ ನೀಡುತ್ತಿದ್ದಾರೆಂಬ ವಿಚಾರ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>