ಕಾರ್ಯಕ್ರಮ ಉದ್ಘಾಟಿಸಿದಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ‘ಬದಲಾದ ಜೀವನ ಶೈಲಿ, ಅನಿಯಮಿತ ಆಹಾರ ಅಭ್ಯಾಸ, ದೈಹಿಕ ಶ್ರಮ ಇಲ್ಲದಿರುವುದು ಮಧುಮೇಹಕ್ಕೆ ಕಾರಣವಾಗಿವೆ. 30 ವರ್ಷ ಮೇಲಿನ ಎಲ್ಲರೂ ಮಧುಮೇಹ ತಪಾಸಣೆಗೆ ಒಳಪಡಬೇಕು. ಮಧುಮೇಹ ಖಚಿತಪಟ್ಟರೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಆರೋಗ್ಯ ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಧುಮೇಹ ತಪಾಸಣೆ ಲಭ್ಯವಿದೆ’ ಎಂದರು.