ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಾಟಕ್ಕೆ ನ್ಯಾಯ ಸಿಗುವವರೆಗೆ ಮಾಲಾರ್ಪಣೆ ಮಾಡಿಸಿಕೊಳ್ಳಲ್ಲ: ದಿಂಗಾಲೇಶ್ವರ ಶ್ರೀ

Published 2 ಏಪ್ರಿಲ್ 2024, 8:21 IST
Last Updated 2 ಏಪ್ರಿಲ್ 2024, 8:21 IST
ಅಕ್ಷರ ಗಾತ್ರ

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಂಬಿಸಿ ಮೋಸ ಮಾಡುತ್ತಾರೆ. ಅವರ ನಡೆವಳಿಕೆ ವಿರೋಧಿಸಿ ಹೋರಾಟಕ್ಕೆ ಇಳಿದಿದ್ದೇನೆ ಎಂದು ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ನಗರದ ಸಾಧನಕೇರಿಯ ಸೇವಾಲಯದಲ್ಲಿ ನಡೆದ ಭಕ್ತರ ಸಭೆಯಲ್ಲಿ ಅವರು ಮಾತನಾಡಿದರು. ಹೋರಾಟಕ್ಕೆ ನ್ಯಾಯ ಸಿಗುವವರೆಗೆ ವೇದಿಕೆಯಲ್ಲಿ ಮಾಲಾರ್ಪಣೆ ಮಾಡಿಸಿಕೊಳ್ಳದಿರಲು ಸಂಕಲ್ಪ ಮಾಡಿದ್ದೇನೆ ಎಂದರು.

ಪ್ರಲ್ಹಾದ ಜೋಶಿ ಅವರು ಪಾಪ ಕಾರ್ಯ ಮಾಡಿ ಅದನ್ನು ಬೇರೆಯವರ ತಲೆಗೆ ಕಟ್ಟುವ ಕೆಲಸ ಮಾಡುತ್ತಾರೆ. ಈ ಭಾಗದ ಲಿಂಗಾಯತ ನಾಯಕರು ನಾಶವಾಗಿದ್ದಾರೆ. ಅವರ ಹೊಡೆತಕ್ಕೆ ಬಹುಸಂಖ್ಯಾತರು ನುಚ್ಚುನೂರಾಗಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT