‘ನಾಲ್ಕು ವರ್ಷಗಳ ಹಿಂದೆ 138 ದಲಿತ ಸಫಾಯಿ ಕರ್ಮಚಾರಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಆದರೆ, ಇ.ಎಸ್.ಐ, ಪಿ.ಎಫ್ ಸೇರಿದಂತೆ ಕಾರ್ಮಿಕ ಕಾಯ್ದೆಯಡಿ ಸಿಗುವ ವಿವಿಧ ಸೌಲಭ್ಯಗಳನ್ನು ನೀಡದೆ ಕಾರ್ಮಿಕರನ್ನು ವಂಚಿಸಲಾಗಿದೆ. ಕಾರ್ಮಿಕರಿಗೆ ಸರ್ಕಾರದಿಂದ ₹13,553 ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ಆದರೆ, ಗುತ್ತಿಗೆದಾರ ವಿನೀತ ತಿವಾರಿ ಎಂಬುವರು ಕಾರ್ಮಿಕರ ಬ್ಯಾಂಕ್ ಪಾಸ್ಬುಕ್, ಎ.ಟಿ.ಎಂ ಕಾರ್ಡ್ ತಮ್ಮ ಬಳಿಯೇ ಇಟ್ಟುಕೊಂಡು, ಕೇವಲ ₹9,000 ವೇತನವನ್ನು ಮಾತ್ರ ಕಾರ್ಮಿಕರಿಗೆ ಕೊಟ್ಟು ಮೋಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.