‘ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ದೋಷ ಎತ್ತಿ ತೋರಿಸಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಏನೂ ಮಾಡಿಲ್ಲ. ಬರಗಾಲದ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬರಗಾಲ ಅಧ್ಯಯನ ಪ್ರವಾಸ ಮಾಡುತ್ತೇನೆ. ಸರ್ಕಾರ ಕೊಟ್ಟ ಅಂಕಿ ಅಂಶ ತಪ್ಪು ಎಂದು ಸಾಬೀತು ಮಾಡುತ್ತೇನೆ' ಎಂದು ಅವರು ತಿಳಿಸಿದರು.