ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ವೈಯಕ್ತಿಕ ಕಾರಣಗಳಿಂದಾಗಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈಗ ಅನರ್ಹರಾಗಿದ್ದಾರೆ. ಅದರಿಂದ ಬಿಜೆಪಿಗೆ ಸರ್ಕಾರ ನಡೆಸಲು ಅನುಕೂಲವಾಯಿತು. ಹಾಗಂತ ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮದಲ್ಲ. ನಮ್ಮ ಮತ್ತು ಅವರ ನಡುವೆ ಸಾಕಷ್ಟು ರಾಜಕೀಯ ಅಂತರವಿದೆ' ಎಂದರು.