ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನಲ್ಲಿ ನೆಲಗುಡ್ಡ ಗ್ರಾಮದಲ್ಲಿ ಜುಲೈ 7ರಂದು ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟ ಮಹಿಳೆ ಸೋಮವ್ವ ಕೋಂ ಸೋಮಪ್ಪ ಗಿಡ ಬಸಪ್ಪನವರ (48) ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ಮೃತರ ಮಗ ಮಂಜುನಾಥ ಸೋಮಪ್ಪ ಚೆಕ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.