ಎರಡು ದಿನಗಳ ಹಿಂದೆ ಬೆಣ್ಣೆಹಳ್ಳ ಪ್ರವಾಹದಿಂದ ಜಲಾವೃತಗೊಂಡಿದ್ದ ರಸ್ತೆ ದಾಟುವಾಗ ನೀರುಪಾಲಾದ ಬ್ಯಾಹಟ್ಟಿಯ ಆನಂದ ಹಿರೇಗೌಡ್ರ ಅವರ ಶವದ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇಂದು ಅವರ ಕುಟುಂಬವನ್ನು ಭೇಟಿ ಮಾಡಿ, ಪೋಷಕರಿಗೆ ಸಾಂತ್ವನ ಹೇಳಿದ್ದೇನೆ. ಶವ ಪತ್ತೆಯಾದ ನಂತರ ಸರ್ಕಾರದಿಂದ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲಾಗುವುದು. ಬೆಳೆಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.