<p><strong>ಹುಬ್ಬಳ್ಳಿ:</strong> ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್ ಮತ್ತು ಬೆಳಗಾವಿ ನಡುವೆ ಆರು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಮುಂದಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಹೈದರಾಬಾದ್–ಬೆಳಗಾವಿ–ಹೈದರಾಬಾದ್ ಎಕ್ಸ್ಪ್ರೆಸ್ ವಿಶೇಷ ರೈಲು (07043) ಅಕ್ಟೋಬರ್ 23, 30 ಹಾಗೂ ನವೆಂಬರ್ 6, 13, 20, 27ರಂದು ಸಂಜೆ 4.30ಕ್ಕೆ ಹೈದರಾಬಾದ್ನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಬೆಳಗಾವಿ ತಲುಪಲಿದೆ.</p>.<p>ಬೆಳಗಾವಿ–ಹೈದರಾಬಾದ್ ಎಕ್ಸ್ಪ್ರೆಸ್ ವಿಶೇಷ ರೈಲು (07044) ಅಕ್ಟೋಬರ್ 24, 31 ಹಾಗೂ ನವೆಂಬರ್ 7, 14, 21, 28ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 7 ಗಂಟೆಗೆ ಹೈದರಾಬಾದ್ ತಲುಪಲಿದೆ.</p>.<p>ಎರಡೂ ಮಾರ್ಗದಲ್ಲಿ ಬೇಗಂಪೇಟ, ಲಿಂಗಂಪಲ್ಲಿ, ವಿಕಾರಾಬಾದ್, ತಾಂಡೂರು, ಸೇಡಂ, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯ ರಸ್ತೆ, ಆದೋನಿ, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಭಾನಾಪುರ, ಗದಗ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್ ಮತ್ತು ಬೆಳಗಾವಿ ನಡುವೆ ಆರು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಮುಂದಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಹೈದರಾಬಾದ್–ಬೆಳಗಾವಿ–ಹೈದರಾಬಾದ್ ಎಕ್ಸ್ಪ್ರೆಸ್ ವಿಶೇಷ ರೈಲು (07043) ಅಕ್ಟೋಬರ್ 23, 30 ಹಾಗೂ ನವೆಂಬರ್ 6, 13, 20, 27ರಂದು ಸಂಜೆ 4.30ಕ್ಕೆ ಹೈದರಾಬಾದ್ನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಬೆಳಗಾವಿ ತಲುಪಲಿದೆ.</p>.<p>ಬೆಳಗಾವಿ–ಹೈದರಾಬಾದ್ ಎಕ್ಸ್ಪ್ರೆಸ್ ವಿಶೇಷ ರೈಲು (07044) ಅಕ್ಟೋಬರ್ 24, 31 ಹಾಗೂ ನವೆಂಬರ್ 7, 14, 21, 28ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 7 ಗಂಟೆಗೆ ಹೈದರಾಬಾದ್ ತಲುಪಲಿದೆ.</p>.<p>ಎರಡೂ ಮಾರ್ಗದಲ್ಲಿ ಬೇಗಂಪೇಟ, ಲಿಂಗಂಪಲ್ಲಿ, ವಿಕಾರಾಬಾದ್, ತಾಂಡೂರು, ಸೇಡಂ, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯ ರಸ್ತೆ, ಆದೋನಿ, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಭಾನಾಪುರ, ಗದಗ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>