ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂದಗೋಳ ಕ್ಷೇತ್ರದಲ್ಲಿ ಹಣ ಹಂಚಲು ಶಿವಕುಮಾರ್ ಬೆಂಗಳೂರಿನಿಂದ 500 ಜನ ಬೆಂಬಲಿಗರನ್ನು ಕರೆದುಕೊಂಡು ಬಂದಿದ್ದಾರೆ. ಉಸ್ತುವಾರಿ ವಹಿಸಿಕೊಂಡ ಮೇಲೆ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಏನೂ ಮಾತನಾಡಿಲ್ಲ. ಶಿವಕುಮಾರ್ ಜಲಸಂಪನ್ಮೂಲ ಸಚಿವರಲ್ಲ; ಭ್ರಷ್ಟಾಚಾರ ಸಂಪನ್ಮೂಲ ಸಚಿವ’ ಎಂದು ಟೀಕಿಸಿದರು.