<p><strong>ಹುಬ್ಬಳ್ಳಿ:</strong> ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಎಂ.ಬಿ. ಪಾಟೀಲ ಹಾಗೂ ಡಿ.ಕೆ. ಶಿವಕುಮಾರ್ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ತಲಾ ₹ 50 ಕೋಟಿ ‘ಬಂಡವಾಳ’ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂದಗೋಳ ಕ್ಷೇತ್ರದಲ್ಲಿ ಹಣ ಹಂಚಲು ಶಿವಕುಮಾರ್ ಬೆಂಗಳೂರಿನಿಂದ 500 ಜನ ಬೆಂಬಲಿಗರನ್ನು ಕರೆದುಕೊಂಡು ಬಂದಿದ್ದಾರೆ. ಉಸ್ತುವಾರಿ ವಹಿಸಿಕೊಂಡ ಮೇಲೆ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಏನೂ ಮಾತನಾಡಿಲ್ಲ. ಶಿವಕುಮಾರ್ ಜಲಸಂಪನ್ಮೂಲ ಸಚಿವರಲ್ಲ; ಭ್ರಷ್ಟಾಚಾರ ಸಂಪನ್ಮೂಲ ಸಚಿವ’ ಎಂದು ಟೀಕಿಸಿದರು.</p>.<p>‘ಮೂರು ವರ್ಷಗಳ ಹಿಂದೆ ಹರಕುಣಿಯಲ್ಲಿ ನಿರಂತರ ಜ್ಯೋತಿ ಯೋಜನೆಗೆ ಶಿವಕುಮಾರ್ ಚಾಲನೆ ನೀಡಿದ್ದರು. ಈಗ ಆ ಗ್ರಾಮದಲ್ಲಿ ಕತ್ತಲು ಕವಿದಿದೆ. ಶಿವಕುಮಾರ್ ಕಾಗದದ ಮೇಲಿನ ಹುಲಿಯಷ್ಟೇ. ಅವರ ಆಟ ಇಲ್ಲಿ ನಡೆಯುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಎಂ.ಬಿ. ಪಾಟೀಲ ಹಾಗೂ ಡಿ.ಕೆ. ಶಿವಕುಮಾರ್ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ತಲಾ ₹ 50 ಕೋಟಿ ‘ಬಂಡವಾಳ’ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂದಗೋಳ ಕ್ಷೇತ್ರದಲ್ಲಿ ಹಣ ಹಂಚಲು ಶಿವಕುಮಾರ್ ಬೆಂಗಳೂರಿನಿಂದ 500 ಜನ ಬೆಂಬಲಿಗರನ್ನು ಕರೆದುಕೊಂಡು ಬಂದಿದ್ದಾರೆ. ಉಸ್ತುವಾರಿ ವಹಿಸಿಕೊಂಡ ಮೇಲೆ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಏನೂ ಮಾತನಾಡಿಲ್ಲ. ಶಿವಕುಮಾರ್ ಜಲಸಂಪನ್ಮೂಲ ಸಚಿವರಲ್ಲ; ಭ್ರಷ್ಟಾಚಾರ ಸಂಪನ್ಮೂಲ ಸಚಿವ’ ಎಂದು ಟೀಕಿಸಿದರು.</p>.<p>‘ಮೂರು ವರ್ಷಗಳ ಹಿಂದೆ ಹರಕುಣಿಯಲ್ಲಿ ನಿರಂತರ ಜ್ಯೋತಿ ಯೋಜನೆಗೆ ಶಿವಕುಮಾರ್ ಚಾಲನೆ ನೀಡಿದ್ದರು. ಈಗ ಆ ಗ್ರಾಮದಲ್ಲಿ ಕತ್ತಲು ಕವಿದಿದೆ. ಶಿವಕುಮಾರ್ ಕಾಗದದ ಮೇಲಿನ ಹುಲಿಯಷ್ಟೇ. ಅವರ ಆಟ ಇಲ್ಲಿ ನಡೆಯುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>