ಇದೇ ಮಾರ್ಗದಲ್ಲಿ ಹೊರಟ್ಟಿದ್ದ ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ರಾಜಣ್ಣ ಕೊರವಿ ಹಾಗೂ ಮಿತ್ರರು ಹಸುವನ್ನು ಗಮನಿಸಿದರು. ಬಳಿಕ, ಪಶುವೈದ್ಯರನ್ನು ಸ್ಥಳಕ್ಕೆ ಕರೆಯಿಸಿದರು. ವೈದ್ಯರಾದ ಡಾ. ಈರಣ್ಣ ಸುಂಕದ, ಡಾ. ಶರಣು ಬದಾಮಿ, ಡಾ. ಹೊನ್ನಿನಾಯ್ಕರ, ಸಿಬ್ಬಂದಿ ಕೆ.ಬಿ. ಹುಬ್ಬಳ್ಳಿ, ಮೌನೇಶ ಹಾಗೂ ಎಸ್.ಕೆ. ಗೌಡರ ಅವರ ತಂಡ ಸ್ಥಳಕ್ಕೆ ಬಂತು.