ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘಿಸಿ ಸಾಕ್ಷ್ಯಚಿತ್ರ: ತನಿಖೆಗೆ ಎಸ್.ಆರ್. ಹಿರೇಮಠ ಆಗ್ರಹ

Last Updated 16 ಜೂನ್ 2020, 8:44 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅರಣ್ಯ ಹಾಗೂ ವನ್ಯಜೀವಿ ಸಮೃದ್ಧಿ ಕುರಿತು ಸಾಕ್ಷ್ಯಚಿತ್ರ ಮಾಡಿರುವ ತಂಡವೊಂದು ನಿಯಮಗಳನ್ನು ಉಲ್ಲಂಘಿಸಿದ್ದು, ಅವರ ವಿರುದ್ಧ ತನಿಖೆಯಾಗಬೇಕು ಎಂದು‌ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆಗ್ರಹಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕ್ಷ್ಯಚಿತ್ರದ ಸಂಪೂರ್ಣ ಹಕ್ಕು ಕರ್ನಾಟಕ ಅರಣ್ಯ ಇಲಾಖೆಯದ್ದಾಗಿರುತ್ತದೆ.‌ ಆದರೆ ಇದನ್ನು ಸಾಕ್ಷ್ಯಚಿತ್ರ ತಯಾರಿಸಿದ‌ ಶರತ್ ಚಂಪತಿ ಹಾಗೂ ಸಂಗಡಿಗರು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಕೆಎಫ್‌ಡಿ ಹಕ್ಕಾಗಿದ್ದರೂ ಸಾಕ್ಷ್ಯಚಿತ್ರವನ್ನು ಬೇರೆ, ಬೇರೆ ಸಂಸ್ಥೆಗಳ ಹೆಸರಿನಲ್ಲಿ ಫ್ರಾನ್ಸ್ 5, ಸ್ವೀಡನ್‌ನ ಎಸ್‌ವಿಟಿ, ಡಿಸ್ಕವರಿ, ಬಿಬಿಸಿ ಗಳಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳೂ ಇದರಲ್ಲಿ‌ ಶಾಮೀಲಾಗಿದ್ದಾರೆ. ಸಾಕ್ಷ್ಯಚಿತ್ರ ಸಂದರ್ಭದಲ್ಲಿ ಸರ್ಕಾರದ ₹ 38 ಕೋಟಿ ವೆಚ್ಚದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT