ಲಾಕ್ಡೌನ್ನಿಂದ ಬಡವರು, ನಿರ್ಗತಿಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತಹವರಿಗೆ ದಾನಿಗಳಿಂದ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಆದರೆ, ತಾವೇ ಜನರಿರುವಲ್ಲಿ ತೆರಳಿ, ಅಗತ್ಯ ವಸ್ತುಗಳನ್ನು ವಿತರಿಸಿದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಹೆಚ್ಚಿದೆ. ಅದನ್ನು ತಪ್ಪಿಸಲು ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿದೆ.