<p>ವಾಸುದೇವ ಎಸ ಮುರಗಿ</p>.<p><strong>ಗುಡಗೇರಿ (ಧಾರವಾಡ ಜಿಲ್ಲೆ):</strong> ಕುಂದಗೋಳ ತಾಲ್ಲೂಕಿನ ಗೌಡಗೇರಿಯ ಮಹಿಳೆಯರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿಯ ದೇವಾಲಯದ ಗೋಪುರ ನಿರ್ಮಾಣಕ್ಕೆ ₹1.10 ಲಕ್ಷ ಗೃಹಲಕ್ಷ್ಮಿ ಯೋಜನೆ ಹಣವನ್ನು ಸಂಗ್ರಹಿಸಿ, ದೇಣಿಗೆ ನೀಡಿದ್ದಾರೆ.</p>.<p>‘ದ್ಯಾಮವ್ವ ದೇವಿ ಗೋಪುರ ನಿರ್ಮಾಣಕ್ಕೆ ಅನೇಕರು ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿದ್ದಾರೆ. ಗ್ರಾಮದ ಅನೇಕ ಮಹಿಳೆಯರೂ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಒಂದು ತಿಂಗಳಿನ ₹2 ಸಾವಿರವನ್ನು ದೇಣಿಗೆಯಾಗಿ ಸಲ್ಲಿಸುತ್ತಿದ್ದು, ₹1.10 ಲಕ್ಷ ಸಂಗ್ರಹವಾಗಿದೆ’ ಎಂದು ದೇವಸ್ಥಾನ ಸಮಿತಿ ಸದಸ್ಯ ಉದ್ದನಗೌಡ ಸಣ್ಣಗೌಡ್ರ ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ದೇವಾಲಯ ಗೋಪುರ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣ ನೀಡಲು ಎಲ್ಲಾ ಮಹಿಳೆಯರು ನಿರ್ಧರಿಸಿದ್ದೇವೆ. ಈಗಾಗಲೇ ಬಹುತೇಕ ಮಹಿಳೆಯರು ನೀಡಿದ್ದು, ಇನ್ನೂ ಹಲವರು ಕೊಡುತ್ತಾರೆ’ ಎಂದು ಯಲ್ಲವ್ವ ಮತ್ತೂರ ಹೇಳಿದರು.</p>.<p>‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅನೇಕರಿಗೆ ಆಸರೆಯಾಗಿದೆ. ಮಹಿಳೆಯರು ಯೋಜನೆ ಹಣವನ್ನು ಕುಟುಂಬ ನಿರ್ವಹಣೆಗೆ ಮತ್ತು ಸಮಾಜದ ಕಾರ್ಯಗಳಿಗೆ ದೇಣಿಗೆ ರೂಪದಲ್ಲಿ ಸಲ್ಲಿಸುತ್ತಿರುವುದು ಉತ್ತಮ ಕಾರ್ಯ’ ಎಂದು ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಬೆಂತೂರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಾಸುದೇವ ಎಸ ಮುರಗಿ</p>.<p><strong>ಗುಡಗೇರಿ (ಧಾರವಾಡ ಜಿಲ್ಲೆ):</strong> ಕುಂದಗೋಳ ತಾಲ್ಲೂಕಿನ ಗೌಡಗೇರಿಯ ಮಹಿಳೆಯರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ದ್ಯಾಮವ್ವ ದೇವಿಯ ದೇವಾಲಯದ ಗೋಪುರ ನಿರ್ಮಾಣಕ್ಕೆ ₹1.10 ಲಕ್ಷ ಗೃಹಲಕ್ಷ್ಮಿ ಯೋಜನೆ ಹಣವನ್ನು ಸಂಗ್ರಹಿಸಿ, ದೇಣಿಗೆ ನೀಡಿದ್ದಾರೆ.</p>.<p>‘ದ್ಯಾಮವ್ವ ದೇವಿ ಗೋಪುರ ನಿರ್ಮಾಣಕ್ಕೆ ಅನೇಕರು ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿದ್ದಾರೆ. ಗ್ರಾಮದ ಅನೇಕ ಮಹಿಳೆಯರೂ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಒಂದು ತಿಂಗಳಿನ ₹2 ಸಾವಿರವನ್ನು ದೇಣಿಗೆಯಾಗಿ ಸಲ್ಲಿಸುತ್ತಿದ್ದು, ₹1.10 ಲಕ್ಷ ಸಂಗ್ರಹವಾಗಿದೆ’ ಎಂದು ದೇವಸ್ಥಾನ ಸಮಿತಿ ಸದಸ್ಯ ಉದ್ದನಗೌಡ ಸಣ್ಣಗೌಡ್ರ ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ದೇವಾಲಯ ಗೋಪುರ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣ ನೀಡಲು ಎಲ್ಲಾ ಮಹಿಳೆಯರು ನಿರ್ಧರಿಸಿದ್ದೇವೆ. ಈಗಾಗಲೇ ಬಹುತೇಕ ಮಹಿಳೆಯರು ನೀಡಿದ್ದು, ಇನ್ನೂ ಹಲವರು ಕೊಡುತ್ತಾರೆ’ ಎಂದು ಯಲ್ಲವ್ವ ಮತ್ತೂರ ಹೇಳಿದರು.</p>.<p>‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅನೇಕರಿಗೆ ಆಸರೆಯಾಗಿದೆ. ಮಹಿಳೆಯರು ಯೋಜನೆ ಹಣವನ್ನು ಕುಟುಂಬ ನಿರ್ವಹಣೆಗೆ ಮತ್ತು ಸಮಾಜದ ಕಾರ್ಯಗಳಿಗೆ ದೇಣಿಗೆ ರೂಪದಲ್ಲಿ ಸಲ್ಲಿಸುತ್ತಿರುವುದು ಉತ್ತಮ ಕಾರ್ಯ’ ಎಂದು ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಬೆಂತೂರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>