ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಪಡೆಯಲು ಭಯ ಬೇಡ: ನಿಂಬಣ್ಣವರ

Last Updated 4 ಜನವರಿ 2022, 6:33 IST
ಅಕ್ಷರ ಗಾತ್ರ

ಕಲಘಟಗಿ: ಲಸಿಕೆ ಪಡೆಯಲು ಮಕ್ಕಳು ಭಯ ಪಡುವ ಅವಶ್ಯಕತೆ ಇಲ್ಲ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಲಸಿಕೆ ನೀಡುತ್ತಿದೆ ಎಂದು ಶಾಸಕ ಸಿ.ಎಂ ನಿಂಬಣ್ಣವರ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಮೂರನೇ ಅಲೆಯ ಮುನ್ಸೂಚನೆ ಇರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ಸರ್ಕಾರ ನೀಡುತ್ತಿರುವ ಲಸಿಕೆ ಪಡೆದರೆ ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ, ತಾಲ್ಲೂಕ ಆರೋಗ್ಯ ವೈದ್ಯಾಧಿಕಾರಿ ಡಾ.ಬಸವರಾಜ ಬಾಸೂರ, ಮಧುಸೂದನ ಗಿರಿಜಾದೇವಿ, ಎಂ.ಆರ್.ಕುಲಕರ್ಣಿ, ಬಾನುಮತಿ ಅಡಗಲ್ಲ, ಜಿ.ಎನ್.ಭಾಗವತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT