<p><strong>ಹುಬ್ಬಳ್ಳಿ</strong>: ‘ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್ನಿಕ್ ಎಂಬಂತೆ ನಡೆದುಕೊಳ್ಳುವುದು ಸರಿಯಲ್ಲ. ಇದರ ಪಾವಿತ್ರ್ಯ ಕುಂದಿಸುವ ಕೆಲಸ ಆಗಬಾರದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ ಸೇರಿ 20ಕ್ಕೂ ಅಧಿಕ ಮಸೂದೆಗಳು ಮಂಡನೆಯಾಗಲಿವೆ’ ಎಂದು ಮಾಹಿತಿ ನೀಡಿದರು.</p>.<p>‘ಭದ್ರಾ ಮೇಲ್ದಂಡೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿ ಕೊಟ್ಟಿಲ್ಲ, ಜಿಎಸ್ಟಿ ಪರಿಷ್ಕರಣೆಯಿಂದಾಗಿ ನಮಗೆ ನಷ್ಟವಾಗಿದೆ. ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದರು.</p>.<p>ರಾಜಭವನವನ್ನು ಲೋಕಭವನ ಎಂದು ಮರು ನಾಮಕರಣ ಮಾಡುವುದು ಆಡಳಿತಾತ್ಮಕ ದೃಷ್ಟಿಯಿಂದ ಸರಿಯಲ್ಲ. ಇದಕ್ಕೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿದ್ದು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್ನಿಕ್ ಎಂಬಂತೆ ನಡೆದುಕೊಳ್ಳುವುದು ಸರಿಯಲ್ಲ. ಇದರ ಪಾವಿತ್ರ್ಯ ಕುಂದಿಸುವ ಕೆಲಸ ಆಗಬಾರದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ ಸೇರಿ 20ಕ್ಕೂ ಅಧಿಕ ಮಸೂದೆಗಳು ಮಂಡನೆಯಾಗಲಿವೆ’ ಎಂದು ಮಾಹಿತಿ ನೀಡಿದರು.</p>.<p>‘ಭದ್ರಾ ಮೇಲ್ದಂಡೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿ ಕೊಟ್ಟಿಲ್ಲ, ಜಿಎಸ್ಟಿ ಪರಿಷ್ಕರಣೆಯಿಂದಾಗಿ ನಮಗೆ ನಷ್ಟವಾಗಿದೆ. ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದರು.</p>.<p>ರಾಜಭವನವನ್ನು ಲೋಕಭವನ ಎಂದು ಮರು ನಾಮಕರಣ ಮಾಡುವುದು ಆಡಳಿತಾತ್ಮಕ ದೃಷ್ಟಿಯಿಂದ ಸರಿಯಲ್ಲ. ಇದಕ್ಕೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿದ್ದು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>