‘ಕಾಂಗ್ರೆಸ್ ಆಡಳಿತದಲ್ಲಿ ಏನು ಮಾಡಿದೆ’ ಎಂದು ಪ್ರಶ್ನಿಸುವ ಬಿಜೆಪಿ ನಾಯಕರು, ಈಗಿನ ನಾಲ್ಕೂವರೆ ವರ್ಷದ ಆಡಳಿತದಲ್ಲಿ ನೀರಾವರಿ ಯೋಜನೆಗೆ ಏನು ಮಾಡಿದ್ದಾರೆ? ಮಹದಾಯಿ ಮತ್ತು ಮೇಕೆದಾಟು ಯೋಜನೆಗೆ ₹1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದವರು, ಕೇವಲ ₹35 ಸಾವಿರ ಕೋಟಿ ವೆಚ್ಚ ಮಾಡಿದ್ದಾರೆ. ಗೋವಾ, ಕರ್ನಾಟಕ ಮತ್ತು ಕೇಂದ್ರದಲ್ಲಿ ಇವರದ್ದೇ ಸರ್ಕಾರವಿದ್ದರೂ, ಮಹದಾಯಿ ಯೋಜನೆ ಅನುಷ್ಠಾನ ಯಾಕಾಗಿಲ್ಲ? ಬದ್ಧತೆ ಹಾಗೂ ಇಚ್ಛಾಶಕ್ತಿಯಿಲ್ಲದ ಸರ್ಕಾರ ಇದಾಗಿದೆ. ಚುನಾವಣೆ ದೃಷ್ಟಿಯಿಂದ ಡಿಪಿಆರ್ಗೆ ಅನುಮತಿ ಪಡೆದಿದ್ದೇವೆ ಎನ್ನುತ್ತ, ಸುಳ್ಳು ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಸರ್ಕಾರದ ಆಯುಸ್ಸು ನೂರು ದಿನ ಮಾತ್ರ, ಅಷ್ಟರಲ್ಲಿ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.