<p><strong>ಧಾರವಾಡ:</strong> ಮನುಷ್ಯನ ಮನ ಪರಿವರ್ತನೆ ಮಾಡುವಲ್ಲಿ ನಾಟಕಗಳು ಪರಿಣಾಮಕಾರಿ ಎಂದು ಹಿರೇಮಠದ ಬಸವರಾಜ ದೇವರು ಹೇಳಿದರು.</p>.<p>ರಂಗಾಯಣ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ, ಪ್ರಿಜನ್ ಮಿನಿಸ್ಟರಿ ವತಿಯಿಂದ ಕೇಂದ್ರ ಕಾರಾಗೃಹದಲ್ಲಿ ಈಚೆಗೆ ನಡೆದ ರಂಗನಾಟಕ ಶಿಬಿರದಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನದಲ್ಲಿ ನಾಟಕವು ಒಂದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೀವನದಲ್ಲಿ ಮಾಡಿದ ತಪ್ಪಿಗಾಗಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕಾರಾಗೃಹದ ನಿವಾಸಿಗಳು ನಾಟಕವನ್ನು ಮನರಂಜನೆಗಾಗಿ ಕಲಿಯದೇ ಮನಸ್ಸು ಪರಿವರ್ತನೆ ಮಾಡಿಕೊಳ್ಳಬೇಕು ಎಂದರು.</p>.<p>ತಪ್ಪನ್ನು ತಿದ್ದಿಕೊಂಡು ಮುಂದಿನ ಜೀವನದಲ್ಲಿ ಉತ್ತಮ ನಾಗರಿಕರಾಗಿರುವುದು ಅವಶ್ಯ ಎಂದು ತಿಳಿಸಿದರು.</p>.<p>ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ಜಗತ್ತು ಒಂದು ನಾಟಕರಂಗ. ನಾವೆಲ್ಲರೂ ಪಾತ್ರಧಾರಿಗಳು. ನಮ್ಮ ಪಾತ್ರಗಳನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು ಎಂದರು.</p>.<p>ಇಸ್ಲಾಂ-ಈ-ಜಮಾತ್ ಟ್ರಸ್ಟ್ನ ಅತೀಕ್ ಅಹಮದ್ ಸಂಗ್ರಸಕೊಪ್ಪ, ಫಾದರ್ ಜೊ.ರೋಡ್ರಿಗ್ಸ್, ಕಾರಾಗೃಹದ ವರಿಷ್ಠಾಧಿಕಾರಿ ನಿರ್ಮಲ ಬಿ.ಆರ್, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ, ಸ್ಯಾಲಿ ಡಿಸೋಜಾ, ದಿವ್ಯಾ ಡಿಸೋಜಾ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಮನುಷ್ಯನ ಮನ ಪರಿವರ್ತನೆ ಮಾಡುವಲ್ಲಿ ನಾಟಕಗಳು ಪರಿಣಾಮಕಾರಿ ಎಂದು ಹಿರೇಮಠದ ಬಸವರಾಜ ದೇವರು ಹೇಳಿದರು.</p>.<p>ರಂಗಾಯಣ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ, ಪ್ರಿಜನ್ ಮಿನಿಸ್ಟರಿ ವತಿಯಿಂದ ಕೇಂದ್ರ ಕಾರಾಗೃಹದಲ್ಲಿ ಈಚೆಗೆ ನಡೆದ ರಂಗನಾಟಕ ಶಿಬಿರದಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನದಲ್ಲಿ ನಾಟಕವು ಒಂದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೀವನದಲ್ಲಿ ಮಾಡಿದ ತಪ್ಪಿಗಾಗಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕಾರಾಗೃಹದ ನಿವಾಸಿಗಳು ನಾಟಕವನ್ನು ಮನರಂಜನೆಗಾಗಿ ಕಲಿಯದೇ ಮನಸ್ಸು ಪರಿವರ್ತನೆ ಮಾಡಿಕೊಳ್ಳಬೇಕು ಎಂದರು.</p>.<p>ತಪ್ಪನ್ನು ತಿದ್ದಿಕೊಂಡು ಮುಂದಿನ ಜೀವನದಲ್ಲಿ ಉತ್ತಮ ನಾಗರಿಕರಾಗಿರುವುದು ಅವಶ್ಯ ಎಂದು ತಿಳಿಸಿದರು.</p>.<p>ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ಜಗತ್ತು ಒಂದು ನಾಟಕರಂಗ. ನಾವೆಲ್ಲರೂ ಪಾತ್ರಧಾರಿಗಳು. ನಮ್ಮ ಪಾತ್ರಗಳನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು ಎಂದರು.</p>.<p>ಇಸ್ಲಾಂ-ಈ-ಜಮಾತ್ ಟ್ರಸ್ಟ್ನ ಅತೀಕ್ ಅಹಮದ್ ಸಂಗ್ರಸಕೊಪ್ಪ, ಫಾದರ್ ಜೊ.ರೋಡ್ರಿಗ್ಸ್, ಕಾರಾಗೃಹದ ವರಿಷ್ಠಾಧಿಕಾರಿ ನಿರ್ಮಲ ಬಿ.ಆರ್, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ, ಸ್ಯಾಲಿ ಡಿಸೋಜಾ, ದಿವ್ಯಾ ಡಿಸೋಜಾ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>