<p><strong>ಹುಬ್ಬಳ್ಳಿ</strong>: ‘ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯು ಫೆ.6ರಿಂದ ಮೂರು ದಿನ ಹುಬ್ಬಳ್ಳಿಯಲ್ಲಿ ‘14ನೇ ಒಣಮೆಣಸಿನಕಾಯಿ ಮೇಳ’ ಏರ್ಪಡಿಸಿದೆ’ ಎಂದು ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಗಿರೀಶ ಹೇಳಿದರು.</p>.<p>‘ಕಳೆದ ವರ್ಷದ ಮೇಳದಲ್ಲಿ 203 ಕ್ವಿಂಟಲ್ ಒಣಮೆಣಸಿನಕಾಯಿ ಮಾರಾಟವಾಗಿ, ₹71 ಲಕ್ಷ ವಹಿವಾಟು ನಡೆದಿತ್ತು. ಈ ಬಾರಿ ಬೇಸಾಯ ಪ್ರದೇಶ ತಗ್ಗಿದ್ದು, ಬೆಲೆಏರಿಕೆ ಸಾಧ್ಯತೆ ಇದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿ 100 ಮಳಿಗೆಗಳಿರಲಿವೆ. ಬಳ್ಳಾರಿ, ಗದಗ, ಧಾರವಾಡ. ಬಾಗಲಕೋಟೆ, ರಾಯಚೂರು, ಹಾವೇರಿ ಸೇರಿ ವಿವಿಧ ಜಿಲ್ಲೆಗಳ ರೈತರು ಭಾಗವಹಿಸಲಿದ್ದಾರೆ.’ ಎಂದರು. </p>.<p>‘ರಾಜ್ಯದಲ್ಲಿ ಸದ್ಯ 79 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಕೃಷಿ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 40 ಸಾವಿರ ಹೆಕ್ಟೇರ್ ತಗ್ಗಿದೆ. 1.58 ಲಕ್ಷ ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ’ ಎಂದರು.</p>.<p><span class="bold"><strong>ಅನುದಾನ ಕೊರತೆ:</strong></span> ‘ಕಳೆದ ವರ್ಷ ಮಂಡಳಿಗೆ ಸರ್ಕಾರ ₹50 ಲಕ್ಷ ಅನುದಾನ ನೀಡಿತ್ತು. ಈ ವರ್ಷ ₹40 ಲಕ್ಷ ಬಂದಿದೆ. ಎಲ್ಲ ಸಾಂಬಾರು ಪದಾರ್ಥಗಳ ಮೇಳ ಆಯೋಜಿಸಲು ಸಾಧ್ಯವಾಗುತ್ತಿಲ್ಲ’ ಎಂದರು.</p>.<p>‘ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬೆಟ್ಟದಮನೆಯಲ್ಲಿ ಅಂದಾಜು ₹35 ಕೋಟಿ ವೆಚ್ಚದಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ‘ಸ್ಪೈಸ್ ಪಾರ್ಕ್’ ನಿರ್ಮಿಸಲು 9 ಎಕರೆ ಜಾಗ ಮಂಜೂರಾಗಿದೆ. ಅಲ್ಲಿ, ಸಾಂಬಾರು ಬೆಳೆಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಸ್ಥಾಪಿಸಲಾಗುವುದು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯು ಫೆ.6ರಿಂದ ಮೂರು ದಿನ ಹುಬ್ಬಳ್ಳಿಯಲ್ಲಿ ‘14ನೇ ಒಣಮೆಣಸಿನಕಾಯಿ ಮೇಳ’ ಏರ್ಪಡಿಸಿದೆ’ ಎಂದು ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಗಿರೀಶ ಹೇಳಿದರು.</p>.<p>‘ಕಳೆದ ವರ್ಷದ ಮೇಳದಲ್ಲಿ 203 ಕ್ವಿಂಟಲ್ ಒಣಮೆಣಸಿನಕಾಯಿ ಮಾರಾಟವಾಗಿ, ₹71 ಲಕ್ಷ ವಹಿವಾಟು ನಡೆದಿತ್ತು. ಈ ಬಾರಿ ಬೇಸಾಯ ಪ್ರದೇಶ ತಗ್ಗಿದ್ದು, ಬೆಲೆಏರಿಕೆ ಸಾಧ್ಯತೆ ಇದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿ 100 ಮಳಿಗೆಗಳಿರಲಿವೆ. ಬಳ್ಳಾರಿ, ಗದಗ, ಧಾರವಾಡ. ಬಾಗಲಕೋಟೆ, ರಾಯಚೂರು, ಹಾವೇರಿ ಸೇರಿ ವಿವಿಧ ಜಿಲ್ಲೆಗಳ ರೈತರು ಭಾಗವಹಿಸಲಿದ್ದಾರೆ.’ ಎಂದರು. </p>.<p>‘ರಾಜ್ಯದಲ್ಲಿ ಸದ್ಯ 79 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಕೃಷಿ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 40 ಸಾವಿರ ಹೆಕ್ಟೇರ್ ತಗ್ಗಿದೆ. 1.58 ಲಕ್ಷ ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ’ ಎಂದರು.</p>.<p><span class="bold"><strong>ಅನುದಾನ ಕೊರತೆ:</strong></span> ‘ಕಳೆದ ವರ್ಷ ಮಂಡಳಿಗೆ ಸರ್ಕಾರ ₹50 ಲಕ್ಷ ಅನುದಾನ ನೀಡಿತ್ತು. ಈ ವರ್ಷ ₹40 ಲಕ್ಷ ಬಂದಿದೆ. ಎಲ್ಲ ಸಾಂಬಾರು ಪದಾರ್ಥಗಳ ಮೇಳ ಆಯೋಜಿಸಲು ಸಾಧ್ಯವಾಗುತ್ತಿಲ್ಲ’ ಎಂದರು.</p>.<p>‘ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬೆಟ್ಟದಮನೆಯಲ್ಲಿ ಅಂದಾಜು ₹35 ಕೋಟಿ ವೆಚ್ಚದಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ‘ಸ್ಪೈಸ್ ಪಾರ್ಕ್’ ನಿರ್ಮಿಸಲು 9 ಎಕರೆ ಜಾಗ ಮಂಜೂರಾಗಿದೆ. ಅಲ್ಲಿ, ಸಾಂಬಾರು ಬೆಳೆಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಸ್ಥಾಪಿಸಲಾಗುವುದು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>