ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಧನ ವಾರ್ತೆ: ದುಂಡಮ್ಮ ತೇಗೂರ

Last Updated 22 ನವೆಂಬರ್ 2021, 14:36 IST
ಅಕ್ಷರ ಗಾತ್ರ

ಅಳ್ನಾವರ: ಇಲ್ಲಿನ ಅರ್ಬನ್ ಬ್ಯಾಂಕಿನ ನಿರ್ದೇಶಕಿ ದುಂಡಮ್ಮ ತೇಗೂರ ( 83 ) ಭಾನುವಾರ ರಾತ್ರಿ ನಿಧನರಾದರು. ಇವರು ಬ್ಯಾಂಕ್‌ನ ಸಂಸ್ಥಾಪಕ ದಿವಂಗತ ಬಿ.ಬಿ. ತೇಗೂರ ಅವರ ಪತ್ನಿ. ಮೃತರಿಗೆ ಮೂವರು ಪುತ್ರರು ಹಾಗೂ ಐವರು ಪುತ್ರಿಯರು ಇದ್ದಾರೆ.

ದುಂಡಮ್ಮ, ಅಳ್ನಾವರ ಅರ್ಬನ್ ಬ್ಯಾಂಕಿನ್ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಮೂರೂವರೆ ದಶಕ ಸಹಕಾರ ರಂಗದಲ್ಲಿ ತೊಡಗಿಕೊಂಡಿದ್ದರು. ಇಲ್ಲಿನ ಅಕ್ಕ ಮಹಾದೇವಿ ಮಹಿಳಾ ಮಂಡಳದಲ್ಲಿ ಸಕ್ರಿಯರಾಗಿದ್ದರು. ಪ್ರತಿ ವರ್ಷ ಇಲ್ಲಿನ ಭಕ್ತರನ್ನು ಶ್ರೀಕ್ಷೇತ್ರ ಉಳವಿಗೆ ಪಾದಯಾತ್ರೆಗೆ ಕರೆದುಕೊಂಡು ಹೋಗುತ್ತಿದ್ದರು.

ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುರಗೋಡದ ನೀಲಕಂಠ ಸ್ವಾಮೀಜಿ, ಶಾಸಕರಾದ ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ತಹಶೀಲ್ದಾರ್ ಅಮರೇಶ ಪಮ್ಮಾರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ, ವೀರಶೈವ ಸಮಾಜದ ಅಧ್ಯಕ್ಷ ಎಸ್.ಬಿ. ಪಾಟೀಲ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ನದೀಮ ಕಂಟ್ರ್ಯಾಕ್ಟರ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT