ಹುಬ್ಬಳ್ಳಿ: ಆಷಾಢ ಮಾಸದ ಮೂರನೇ ಮಂಗಳವಾರದ ಅಂಗವಾಗಿನಗರದ ಹೊಸೂರಿನ ಗಾಳಿ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಜಾತ್ರೆ ಅಂಗವಾಗಿ ಬೆಳಿಗ್ಗೆ 5 ಗಂಟೆಗೆ ದೇವಿಯ ಮೂರ್ತಿಗೆ ಅಭಿಷೇಕ, ಮಹಾಪೂಜೆ, ನಂತರ ಪಲ್ಲಕ್ಕಿ ಉತ್ಸವ ನಡೆಯಿತು. ಮಹಿಳೆಯರು ಪೂರ್ಣಕುಂಭ, ಕಳಶ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ವಿವಿಧ ಕಲಾತಂಡಗಳು ಜಾತ್ರೆಯ ಮೆರುಗು ಹೆಚ್ಚಿಸಿದವು.
ಬೆಳಿಗ್ಗೆಯಿಂದ ಸಂಜೆವರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಕೋವಿಡ್ ಕಾರಣ ಕಳೆದ ಎರಡು ವರ್ಷಗಳಿಂದ ಜಾತ್ರೆ ನಡೆದಿರಲಿಲ್ಲ. ಬಾಗಲಕೋಟೆ, ವಿಜಯಪುರ, ಬೆಂಗಳೂರು, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ವಿವಿಧೆಡೆಯ ಭಕ್ತರು ಬಂದು ದರ್ಶನ ಪಡೆದರು ಎಂದು ಗಾಳಿ ದುರ್ಗಮ್ಮದೇವಿ ಸೇವಾ ಸಮಿತಿ ಅಧ್ಯಕ್ಷ ಸಂತೋಷ ಹಿರೇಕೆರೂರ ಹೇಳಿದರು.