<p><strong>ಹುಬ್ಬಳ್ಳಿ</strong>: ನಗರದ ಹೃದಯ ಭಾಗವಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಜ. 15ರಂದುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿನಗರದ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಮೊದಲ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಐಆರ್ಸಿಟಿಸಿ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಈ ವಿಷಯ ತಿಳಿಸಿದರು.</p>.<p>‘₹300 ಕೋಟಿ ಮೊತ್ತದ ಕಾಮಗಾರಿ ಇದಾಗಿದ್ದು, ಗಬ್ಬೂರು ಕ್ರಾಸ್ವರೆಗೆ ವಿಸ್ತರಣೆ ಮಾಡಬೇಕು ಎನ್ನುವ ಆಸೆ ನನ್ನದು. ಇದಕ್ಕೆ ಅಂದಾಜು ₹100 ಕೋಟಿ ಹೆಚ್ಚುವರಿಯಾಗಿ ಖರ್ಚಾಗಲಿದ್ದು, ಮಹಾನಗರ ಪಾಲಿಕೆ, ಹುಡಾ ಮತ್ತು ಸ್ಥಳೀಯ ಸಂಸ್ಥೆಗಳಿಂದ ₹50 ಕೋಟಿ ಹೊಂದಿಸಿಕೊಂಡು, ಇನ್ನುಳಿದ ₹50 ಕೋಟಿ ಸಾಲ ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಅಧಿಕಾರಿಗಳಿಗೂ ಸೂಚಿಸಿದ್ದೇನೆ’ ಎಂದರು.</p>.<p>‘ಅದೇ ದಿನ ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ₹27 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಲಿದ್ದಾರೆ.ಫ್ಲೈ ಓವರ್ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಸ್ಥಳೀಯವಾಗಿ ಡೆನಿಸನ್ ಹೋಟೆಲ್ನಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p><strong>ತೃಪ್ತಿ ನೀಡಿಲ್ಲ:</strong> ಎರಡು ದಿನಗಳ ಹಿಂದೆ ಅವಳಿ ನಗರಗಳಲ್ಲಿ ಸುರಿದ ಮಳೆಯಿಂದ ಆದ ಅನಾಹುತದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಬಿಆರ್ಟಿಎಸ್ ಕಾರಿಡಾರ್ನಲ್ಲಿ ನೀರು ನಿಲ್ಲುತ್ತಿರುವ ಬಗ್ಗೆ ಅನೇಕ ದೂರುಗಳಿವೆ. ಒಟ್ಟಾರೆಯಾಗಿ ಈ ಕಾಮಗಾರಿ ತೃಪ್ತಿ ನೀಡಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುವಷ್ಟರಲ್ಲಿ ಶೇ 90ರಷ್ಟು ಕಾಮಗಾರಿ ಮುಗಿದು ಹೋಗಿತ್ತು. ಮುಂದಿನ ವಾರದಲ್ಲಿ ಅಧಿಕಾರಿಗಳ ಸಭೆ ಕರೆದು ಲೋಪದೋಷಗಳನ್ನು ಸರಿಪಡಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ್ ಸಿಂಗ್, ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಐಆರ್ಸಿಟಿಸಿ ವಿಭಾಗೀಯ ವ್ಯವಸ್ಥಾಪಕ ಬಿ. ರಮೇಶ,ರೈಲ್ವೆ ಅಧಿಕಾರಿಗಳಾದ ಜೋಗಿಂದರ್ ಯದುವೇಂದು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನಗರದ ಹೃದಯ ಭಾಗವಾದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಜ. 15ರಂದುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.</p>.<p>ಕೇಂದ್ರ ಸಚಿವ ಪ್ರಲ್ಹಾದ ಜೋಶಿನಗರದ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಮೊದಲ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಐಆರ್ಸಿಟಿಸಿ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಈ ವಿಷಯ ತಿಳಿಸಿದರು.</p>.<p>‘₹300 ಕೋಟಿ ಮೊತ್ತದ ಕಾಮಗಾರಿ ಇದಾಗಿದ್ದು, ಗಬ್ಬೂರು ಕ್ರಾಸ್ವರೆಗೆ ವಿಸ್ತರಣೆ ಮಾಡಬೇಕು ಎನ್ನುವ ಆಸೆ ನನ್ನದು. ಇದಕ್ಕೆ ಅಂದಾಜು ₹100 ಕೋಟಿ ಹೆಚ್ಚುವರಿಯಾಗಿ ಖರ್ಚಾಗಲಿದ್ದು, ಮಹಾನಗರ ಪಾಲಿಕೆ, ಹುಡಾ ಮತ್ತು ಸ್ಥಳೀಯ ಸಂಸ್ಥೆಗಳಿಂದ ₹50 ಕೋಟಿ ಹೊಂದಿಸಿಕೊಂಡು, ಇನ್ನುಳಿದ ₹50 ಕೋಟಿ ಸಾಲ ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಅಧಿಕಾರಿಗಳಿಗೂ ಸೂಚಿಸಿದ್ದೇನೆ’ ಎಂದರು.</p>.<p>‘ಅದೇ ದಿನ ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ₹27 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಲಿದ್ದಾರೆ.ಫ್ಲೈ ಓವರ್ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಸ್ಥಳೀಯವಾಗಿ ಡೆನಿಸನ್ ಹೋಟೆಲ್ನಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p><strong>ತೃಪ್ತಿ ನೀಡಿಲ್ಲ:</strong> ಎರಡು ದಿನಗಳ ಹಿಂದೆ ಅವಳಿ ನಗರಗಳಲ್ಲಿ ಸುರಿದ ಮಳೆಯಿಂದ ಆದ ಅನಾಹುತದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಬಿಆರ್ಟಿಎಸ್ ಕಾರಿಡಾರ್ನಲ್ಲಿ ನೀರು ನಿಲ್ಲುತ್ತಿರುವ ಬಗ್ಗೆ ಅನೇಕ ದೂರುಗಳಿವೆ. ಒಟ್ಟಾರೆಯಾಗಿ ಈ ಕಾಮಗಾರಿ ತೃಪ್ತಿ ನೀಡಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುವಷ್ಟರಲ್ಲಿ ಶೇ 90ರಷ್ಟು ಕಾಮಗಾರಿ ಮುಗಿದು ಹೋಗಿತ್ತು. ಮುಂದಿನ ವಾರದಲ್ಲಿ ಅಧಿಕಾರಿಗಳ ಸಭೆ ಕರೆದು ಲೋಪದೋಷಗಳನ್ನು ಸರಿಪಡಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ್ ಸಿಂಗ್, ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಐಆರ್ಸಿಟಿಸಿ ವಿಭಾಗೀಯ ವ್ಯವಸ್ಥಾಪಕ ಬಿ. ರಮೇಶ,ರೈಲ್ವೆ ಅಧಿಕಾರಿಗಳಾದ ಜೋಗಿಂದರ್ ಯದುವೇಂದು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>