<p><strong>ಧಾರವಾಡ:</strong> ‘ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಜನತಾ ಶಿಕ್ಷಣ ಸಮಿತಿ ಜವಾಬ್ದಾರಿ ತೆಗೆದುಕೊಳ್ಳದಿದ್ದರೆ ಉತ್ತರ ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದಿಂದ ವಂಚಿತರಾಗುತ್ತಿದ್ದರು’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ನಗರದ ಜೆಎಸ್ಎಸ್ ಕಾಲೇಜಿನಲ್ಲಿ ಈಚೆಗೆ ನಡೆದ ಜೆಎಸ್ಎಸ್ ನೂತನ ಆಡಳಿತ ಮಂಡಳಿಯ 53ನೇ ವರ್ಷದ ಪಾದಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘1973ರಲ್ಲಿ ಈ ಜನತಾ ಶಿಕ್ಷಣ ಸಮಿತಿಯನ್ನು ವಹಿಸಿಕೊಂಡಾಗ ಆರ್ಥಿಕ ಸಂಕಷ್ಟದಲ್ಲಿತ್ತು. ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಂಸ್ಥೆಯನ್ನು ಪುನರುಜ್ಜೀವನಗೊಳಿಸಿದರು. ಪ್ರೊ. ನ.ವಜ್ರಕುಮಾರ ಅವರನ್ನು ಕಾರ್ಯದರ್ಶಿಗಳನ್ನಾಗಿ ನೇಮಿಸಿ ಈ ಸಂಸ್ಥೆಯ ಬಲವರ್ಧನೆಯ ಕಾರ್ಯ ಪ್ರಾರಂಭಿಸಿದರು’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಹುಕ್ಕೇರಿಕರ್ ರಾಮರಾಯರಿಂದ ಸ್ಥಾಪಿತವಾದ ಸಂಸ್ಥೆ, ನೂತನ ಆಡಳಿತ ಮಂಡಳಿ ವಹಿಸಿಕೊಂಡು ಇದೀಗ 53ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ. ಹೆಗ್ಗಡೆ ಅವರಿಗೆ ಧರ್ಮಸ್ಥಳ ಧರ್ಮಭೂಮಿಯಾದರೆ, ಧಾರವಾಡ ಕರ್ಮಭೂಮಿ ಆಗಿದೆ’ ಎಂದು ಹೇಳಿದರು.</p>.<p>‘ಜೆಎಸ್ಎಸ್ ಸಂಸ್ಥೆಯ ಅಡಿಯಲ್ಲಿ ಪ್ರಸ್ತುತ 25 ಸಂಸ್ಥೆಗಳಿವೆ. 22 ಸಾವಿರ ವಿದ್ಯಾರ್ಥಿಗಳು, 1,300 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಧಾರವಾಡಕ್ಕೆ ‘ವಿದ್ಯಾಕಾಶಿ’ ಹೆಸರು ಬರಲು ಹೆಗ್ಗಡೆ ಅವರ ಕೊಡುಗೆ ಕೂಡ ಇದೆ’ ಎಂದರು.</p>.<p>ಆಡಳಿತ ಮಂಡಳಿಯ ಸದಸ್ಯ ಶ್ರೀಕಾಂತ ಕೆಮ್ತೂರ ಅಧ್ಯಕ್ಷತೆ ವಹಿಸಿದ್ದರು. ಮಹಾವೀರ ಉಪಾದ್ಯೆ, ಸೂರಜ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಜನತಾ ಶಿಕ್ಷಣ ಸಮಿತಿ ಜವಾಬ್ದಾರಿ ತೆಗೆದುಕೊಳ್ಳದಿದ್ದರೆ ಉತ್ತರ ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದಿಂದ ವಂಚಿತರಾಗುತ್ತಿದ್ದರು’ ಎಂದು ಜೆಎಸ್ಎಸ್ ಕಾರ್ಯದರ್ಶಿ ಅಜಿತ ಪ್ರಸಾದ ಹೇಳಿದರು.</p>.<p>ನಗರದ ಜೆಎಸ್ಎಸ್ ಕಾಲೇಜಿನಲ್ಲಿ ಈಚೆಗೆ ನಡೆದ ಜೆಎಸ್ಎಸ್ ನೂತನ ಆಡಳಿತ ಮಂಡಳಿಯ 53ನೇ ವರ್ಷದ ಪಾದಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘1973ರಲ್ಲಿ ಈ ಜನತಾ ಶಿಕ್ಷಣ ಸಮಿತಿಯನ್ನು ವಹಿಸಿಕೊಂಡಾಗ ಆರ್ಥಿಕ ಸಂಕಷ್ಟದಲ್ಲಿತ್ತು. ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಂಸ್ಥೆಯನ್ನು ಪುನರುಜ್ಜೀವನಗೊಳಿಸಿದರು. ಪ್ರೊ. ನ.ವಜ್ರಕುಮಾರ ಅವರನ್ನು ಕಾರ್ಯದರ್ಶಿಗಳನ್ನಾಗಿ ನೇಮಿಸಿ ಈ ಸಂಸ್ಥೆಯ ಬಲವರ್ಧನೆಯ ಕಾರ್ಯ ಪ್ರಾರಂಭಿಸಿದರು’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಹುಕ್ಕೇರಿಕರ್ ರಾಮರಾಯರಿಂದ ಸ್ಥಾಪಿತವಾದ ಸಂಸ್ಥೆ, ನೂತನ ಆಡಳಿತ ಮಂಡಳಿ ವಹಿಸಿಕೊಂಡು ಇದೀಗ 53ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ. ಹೆಗ್ಗಡೆ ಅವರಿಗೆ ಧರ್ಮಸ್ಥಳ ಧರ್ಮಭೂಮಿಯಾದರೆ, ಧಾರವಾಡ ಕರ್ಮಭೂಮಿ ಆಗಿದೆ’ ಎಂದು ಹೇಳಿದರು.</p>.<p>‘ಜೆಎಸ್ಎಸ್ ಸಂಸ್ಥೆಯ ಅಡಿಯಲ್ಲಿ ಪ್ರಸ್ತುತ 25 ಸಂಸ್ಥೆಗಳಿವೆ. 22 ಸಾವಿರ ವಿದ್ಯಾರ್ಥಿಗಳು, 1,300 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಧಾರವಾಡಕ್ಕೆ ‘ವಿದ್ಯಾಕಾಶಿ’ ಹೆಸರು ಬರಲು ಹೆಗ್ಗಡೆ ಅವರ ಕೊಡುಗೆ ಕೂಡ ಇದೆ’ ಎಂದರು.</p>.<p>ಆಡಳಿತ ಮಂಡಳಿಯ ಸದಸ್ಯ ಶ್ರೀಕಾಂತ ಕೆಮ್ತೂರ ಅಧ್ಯಕ್ಷತೆ ವಹಿಸಿದ್ದರು. ಮಹಾವೀರ ಉಪಾದ್ಯೆ, ಸೂರಜ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>