ಪ್ರಾದೇಶಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಬಿಳಿಗಿರಿ ಕೃಷ್ಣಮೂರ್ತಿ, ‘ಮೇಲಗಡೆಯಿಂದ ಶಿಕ್ಷಣಕ್ಕೆ ಬುನಾದಿ ಹಾಕಲಾಗುತ್ತಿದೆ. ಅದು ಪ್ರಾಥಮಿಕ ಶಿಕ್ಷಣದಲ್ಲಿ ಆಗಬೇಕಿದೆ. ಶಾಲೆಗಳಿಗೆ ಭೇಟಿ ನೀಡಿದಾಗ ಕೆಲವು ಮಕ್ಕಳಿಗೆ ಕನ್ನಡ ಸಹ ಸರಿಯಾಗಿ ಬರದಿರುವುದು ಕಂಡು ಬರುತ್ತದೆ. ಶಿಕ್ಷಣ ಪದ್ಧತಿಯಲ್ಲಿ ವಿಷಯ ವಿಶ್ಲೇಷಣೆ ಇಲ್ಲ, ಮಕ್ಕಳಿಗೆ ವಿಶ್ಲೇಷಣಾತ್ಮಕ ಜ್ಞಾನ ಬಿತ್ತುವುದಿಲ್ಲ. ಶಿಕ್ಷಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ. ಅವರೆಲ್ಲ ತಮಗೆ ದೊರೆತ ಅದ್ಭುತ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕಿದೆ’ ಎಂದು ಅಭಿಪ್ರಾಯಪಟ್ಟರು.