82ನೇ ವಾರ್ಡ್ನ ಪಕ್ಷೇತರ ಅಭ್ಯರ್ಥಿ ಅಕ್ಷತಾ ಅಸುಂಡಿ ನೂರಾರು ಬೆಂಬಲಿಗರೊಂದಿಗೆ ಸೋನಿಯಾಗಾಂಧಿ ನಗರದಲ್ಲಿ ಪ್ರಚಾರ ನಡೆಸುತ್ತಿದ್ದರು. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಶಾಮರಾಜ್ ಸಜ್ಜನ ಅವರು ಸ್ಥಳಕ್ಕೆ ಬಂದು, ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಇಷ್ಟೊಂದು ಮಂದಿ ಸೇರಿ ಪ್ರಚಾರ ನಡೆಸಬಾರದು ಎಂದು ಎಚ್ಚರಿಸಿದ್ದಾರೆ. ಆಗ ಬೆಂಬಲಿಗರು, ಪಕ್ಷೇತರ ಅಭ್ಯರ್ಥಿಗೆ ಒಂದು ನ್ಯಾಯ, ಪಕ್ಷದ ಅಭ್ಯರ್ಥಿಗೆ ಒಂದು ನ್ಯಾಯವೇ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಹಾಗೂ ಬೆಂಬಲಿಗರ ನಡುವೆ ವಾಗ್ವಾದ ನಡೆದು ಪರಸ್ಪರ ನೂಕಾಟ, ಗಲಾಟೆಯಾಗಿದೆ. ಇದರಿಂದ ಆಕ್ರೋಶಗೊಂಡ ಬೆಂಬಲಿಗರು ಪೊಲೀಸರಿಗೆ ಧಿಕ್ಕಾರ ಕೂಗಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.