ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು, ಹಿಂಡನ್ನು ಕಾಡಿನತ್ತ ಕಳುಹಿಸಲು ಕಾರ್ಯಾಚರಣೆ ನಡೆಸಿದರು. ಬುಧವಾರ ಸಂಜೆಯವರೆಗೂ ಅರಣ್ಯಾಧಿಕಾರಿಗಳ ಪ್ರಯತ್ನ ಮುಂದುವರೆದಿತ್ತು. ಆನೆಗಳು ಕಾಡಿಗೆ ಮರಳುವವರೆಗೂ ಆನೆಗಳಿರುವ ಸ್ಥಳಕ್ಕೆ ಹಾಗೂ ಹೊಲಗಳಿಗೆ ಹೋಗದಂತೆ ಸೂಚಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶ್ರೀಕಾಂತ ಪಾಟೀಲ ತಿಳಿಸಿದರು.