<p><strong>ಹುಬ್ಬಳ್ಳಿ:</strong> ‘ಕೇಂದ್ರ ಸಚಿವ ಸಂಪುಟವು ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ಉತ್ಪಾದನಾ ವಲಯಕ್ಕೆ ಮತ್ತು ಉದ್ಯೋಗಿಗಳಿಗೆ ಪ್ರೋತ್ಸಾಹಧನ ದೊರೆಯಲಿದೆ’ ಎಂದು ಹುಬ್ಬಳ್ಳಿ ವಲಯದ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (ಗ್ರೇಡ್–1) ಪರಿಪುರನ ನಾಥ ಹೇಳಿದರು. </p>.<p>ನಗರದ ಭವಿಷ್ಯ ನಿಧಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ’ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗಿಗಳ ಸಾಮಾಜಿಕ ಭದ್ರತೆ ಹೆಚ್ಚಿಸುವುದು ಈ ಯೋಜನೆಯ ಉದ್ಧೇಶವಾಗಿದೆ’ ಎಂದರು. </p>.<p>‘ಆಗಸ್ಟ್ 1, 2025ರಿಂದ ಜುಲೈ 31, 2027ರ ನಡುವೆ ಸೃಷ್ಟಿಯಾಗುವ ಉದ್ಯೋಗಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಹೊಸ ಉದ್ಯೋಗಗಳು ಸೃಷ್ಟಿಸುವ ಗುರಿ ಹೊಂದಲಾಗಿದೆ’ ಎಂದರು. </p>.<p>‘ಮೊದಲ ಬಾರಿಗೆ ಉದ್ಯೋಗ ಪಡೆಯುವ ಉದ್ಯೋಗಿಗಳಿಗೆ ವರ್ಷದಲ್ಲಿ ಎರಡು ಕಂತುಗಳಲ್ಲಿ ಗರಿಷ್ಠ ₹15 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಇದರೊಂದಿಗೆ ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ ಪ್ರೋತ್ಸಾಹಧವನ್ನೂ ನೀಡಲಾಗುತ್ತದೆ’ ಎಂದರು. </p>.<p>‘ಮೊದಲ ಕಂತಿನ ಪ್ರೋತ್ಸಾಹಧನವನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ನೇರವಾಗಿ ಉದ್ಯೋಗಿಯ ಖಾತೆಗೆ ಪಾವತಿಸಲಾಗುತ್ತದೆ’ ಎಂದರು. </p>.<p>’ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗವು ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುವಲ್ಲಿ ಗಮನ ಹರಿಸಿದರೆ, ಎರಡನೇ ಭಾಗವು ಉದ್ಯೋಗದಾತರ ಮೇಲೆ ಗಮನ ಹರಿಸಲಿದೆ‘ ಎಂದರು. </p>.<p>‘ಗರಿಷ್ಠ ₹1 ಲಕ್ಷವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಈ ಪ್ರೋತ್ಸಾಹಧನ ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ತಿಂಗಳಿಗೆ ₹3,000 ಪ್ರೋತ್ಸಾಹಧನ ನೀಡಲಿದೆ. ಇದನ್ನು ಎರಡು ವರ್ಷಗಳ ವರೆಗೆ ನೀಡಲಾಗುತ್ತದೆ. ತಯಾರಿಕಾ ವಲಯಕ್ಕೆ ಪ್ರೋತ್ಸಾಹಧನವನ್ನು 3 ಮತ್ತು 4ನೇ ವರ್ಷಗಳ ತನಕ ವಿಸ್ತರಿಸಲಾಗುವುದು. ಇದರಿಂದ ಸುಮಾರು 2.60 ಕೋಟಿ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಸಲು ಉದ್ಯೋಗದಾತರನ್ನು ಪ್ರೋತ್ಸಾಹಿಸುವ ನಿರೀಕ್ಷೆ ಇದೆ’ ಎಂದರು. </p>.<p>‘₹10 ಸಾವಿರ ತನಕ ಇಪಿಎಫ್ ವೇತನ ಹೊಂದಿರುವ ಉದ್ಯೋಗಿಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ಸಿಗಲಿದೆ’ ಎಂದರು. </p>.<p>‘ಉದ್ಯೋಗಿಗಳಲ್ಲಿ ಉಳಿತಾಯ ಮನೋಭಾವ ಉತ್ತೇಜಿಸಲು ಹಾಗೂ ಉದ್ಯೋಗದಾತರಿಗೆ ಹೆಚ್ಚಿನ ಉದ್ಯೋಗಗಳನ್ನು ಸೃಜಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆ ಸಹಾಯಕವಾಗಲಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕೇಂದ್ರ ಸಚಿವ ಸಂಪುಟವು ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ಉತ್ಪಾದನಾ ವಲಯಕ್ಕೆ ಮತ್ತು ಉದ್ಯೋಗಿಗಳಿಗೆ ಪ್ರೋತ್ಸಾಹಧನ ದೊರೆಯಲಿದೆ’ ಎಂದು ಹುಬ್ಬಳ್ಳಿ ವಲಯದ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (ಗ್ರೇಡ್–1) ಪರಿಪುರನ ನಾಥ ಹೇಳಿದರು. </p>.<p>ನಗರದ ಭವಿಷ್ಯ ನಿಧಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ’ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗಿಗಳ ಸಾಮಾಜಿಕ ಭದ್ರತೆ ಹೆಚ್ಚಿಸುವುದು ಈ ಯೋಜನೆಯ ಉದ್ಧೇಶವಾಗಿದೆ’ ಎಂದರು. </p>.<p>‘ಆಗಸ್ಟ್ 1, 2025ರಿಂದ ಜುಲೈ 31, 2027ರ ನಡುವೆ ಸೃಷ್ಟಿಯಾಗುವ ಉದ್ಯೋಗಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಹೊಸ ಉದ್ಯೋಗಗಳು ಸೃಷ್ಟಿಸುವ ಗುರಿ ಹೊಂದಲಾಗಿದೆ’ ಎಂದರು. </p>.<p>‘ಮೊದಲ ಬಾರಿಗೆ ಉದ್ಯೋಗ ಪಡೆಯುವ ಉದ್ಯೋಗಿಗಳಿಗೆ ವರ್ಷದಲ್ಲಿ ಎರಡು ಕಂತುಗಳಲ್ಲಿ ಗರಿಷ್ಠ ₹15 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಇದರೊಂದಿಗೆ ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ ಪ್ರೋತ್ಸಾಹಧವನ್ನೂ ನೀಡಲಾಗುತ್ತದೆ’ ಎಂದರು. </p>.<p>‘ಮೊದಲ ಕಂತಿನ ಪ್ರೋತ್ಸಾಹಧನವನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ನೇರವಾಗಿ ಉದ್ಯೋಗಿಯ ಖಾತೆಗೆ ಪಾವತಿಸಲಾಗುತ್ತದೆ’ ಎಂದರು. </p>.<p>’ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗವು ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುವಲ್ಲಿ ಗಮನ ಹರಿಸಿದರೆ, ಎರಡನೇ ಭಾಗವು ಉದ್ಯೋಗದಾತರ ಮೇಲೆ ಗಮನ ಹರಿಸಲಿದೆ‘ ಎಂದರು. </p>.<p>‘ಗರಿಷ್ಠ ₹1 ಲಕ್ಷವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಈ ಪ್ರೋತ್ಸಾಹಧನ ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ತಿಂಗಳಿಗೆ ₹3,000 ಪ್ರೋತ್ಸಾಹಧನ ನೀಡಲಿದೆ. ಇದನ್ನು ಎರಡು ವರ್ಷಗಳ ವರೆಗೆ ನೀಡಲಾಗುತ್ತದೆ. ತಯಾರಿಕಾ ವಲಯಕ್ಕೆ ಪ್ರೋತ್ಸಾಹಧನವನ್ನು 3 ಮತ್ತು 4ನೇ ವರ್ಷಗಳ ತನಕ ವಿಸ್ತರಿಸಲಾಗುವುದು. ಇದರಿಂದ ಸುಮಾರು 2.60 ಕೋಟಿ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಸಲು ಉದ್ಯೋಗದಾತರನ್ನು ಪ್ರೋತ್ಸಾಹಿಸುವ ನಿರೀಕ್ಷೆ ಇದೆ’ ಎಂದರು. </p>.<p>‘₹10 ಸಾವಿರ ತನಕ ಇಪಿಎಫ್ ವೇತನ ಹೊಂದಿರುವ ಉದ್ಯೋಗಿಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ಸಿಗಲಿದೆ’ ಎಂದರು. </p>.<p>‘ಉದ್ಯೋಗಿಗಳಲ್ಲಿ ಉಳಿತಾಯ ಮನೋಭಾವ ಉತ್ತೇಜಿಸಲು ಹಾಗೂ ಉದ್ಯೋಗದಾತರಿಗೆ ಹೆಚ್ಚಿನ ಉದ್ಯೋಗಗಳನ್ನು ಸೃಜಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆ ಸಹಾಯಕವಾಗಲಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>