ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ’ ಅಭಿಯಾನ

Published 21 ಅಕ್ಟೋಬರ್ 2023, 6:50 IST
Last Updated 21 ಅಕ್ಟೋಬರ್ 2023, 6:50 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ‘ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ’ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದರು.

ಗ್ರಾಮದ ಮನೆ- ಮನೆ ಭೇಟಿ ನೀಡಿ ಸದರಿ ಅಭಿಯಾನದ ಬಗ್ಗೆ ಮಾಹಿತಿ ವೈಯಕ್ತಿಕ ಕಾಮಗಾರಿ ಬೇಡಿಕೆ ಪಟ್ಟಿಗೆಯಲ್ಲಿ ಸಾರ್ವಜನಿಕರಿಂದ ಹಾಗೂ ರೈತರಿಂದ ಕಾಮಗಾರಿ ಬೇಡಿಕೆ ಅರ್ಜಿ ಸಂಗ್ರಹಣೆ ಮಾಡಿದರು. ಪಂಚಾಯ್ತಿ ಸ್ವಚ್ಛ ವಾಹನದ ಮೂಲಕ ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಚನ್ನಮಲ್ಲಪ್ಪ ಉಳಾಗಡ್ಡಿ ಮಾತನಾಡಿ, ‘ಜನರು ನರೇಗಾ ಯೋಜನೆಯಡಿ ತಮಗೆ ಬೇಕಾದ ವೈಯಕ್ತಿಕ ಕಾಮಗಾರಿ ಅರ್ಜಿ ಬರೆದು ಕಾಮಗಾರಿ ಪೆಟ್ಟಿಗೆಗೆ ಹಾಕಿದರೆ ಗ್ರಾಮ ಸಭೆ ನಡೆಸಿ ಕ್ರಿಯಾಯೋಜನೆಗೆ ಸೇರ್ಪಡೆ ಮಾಡುತ್ತೇವೆ’ ಎಂದರು.

ಗ್ರಾಮ ಪಂಚಾಯ್ತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT