ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರದ ಅಧಿಕಾರಿಗಳು ‘ಅತಿಕ್ರಮಣ ತೆರವು ಮಾಡಲಾಗುವುದು ಎಂದು ಹಿಂದೆಯೇ ಸೂಚನೆ ನೀಡಲಾಗಿತ್ತು. ಶನಿವಾರವೂ ಇದರ ಬಗ್ಗೆ ಮಾಹಿತಿ ನೀಡಿದ್ದೆವು. ಅತಿಕ್ರಮಣವಾದ ಉಳಿದ ಪ್ರದೇಶಗಳಲ್ಲಿಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಸೂಚನೆ ನೀಡಿರುವ ಮನೆ ಹಾಗೂ ಅಂಗಡಿಯವರು ಸಾಮಗ್ರಿಗಳನ್ನು ತೆಗೆದಿಟ್ಟುಕೊಳ್ಳಬೇಕು’ ಎಂದು ಹೇಳಿದರು.