<p><strong>ಧಾರವಾಡ:</strong> ‘ಮನುಷ್ಯ ಪ್ರಗತಿ ಹೆಸರಿನಲ್ಲಿ ಪರಿಸರ ನಾಶಪಡಿಸುತ್ತಿದ್ದಾನೆ. ಪರಿಸರ ಸಂರಕ್ಷಣೆಗೆ ಜನಜಾಗೃತಿ ಅಗತ್ಯವಿದೆ’ ಎಂದು ಪ್ರೊ. ಅರವಿಂದ ಮೂಲಿಮನಿ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಉನ್ನತ ಭಾರತ ಅಭಿಯಾನ ಕೋಶ ಹಾಗೂ ದಿ ಇಕೋ ಫ್ಯಾಕ್ಟರಿ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಶಾಶ್ವತ್ ಭಾರತ ಸೇತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಓಝೋನ್ ಪದರಕ್ಕೂ ಹಾಣಿಯಾಗುತ್ತಿದೆ. ಗಾಳಿ, ಆಹಾರ ಹಾಗೂ ಮಾನವ ದೇಹದಲ್ಲಿನ ರಕ್ತವೂ ಕೂಡ ವಿಷಪೂರಿತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>ದಿ ಇಕೋ ಫ್ಯಾಕ್ಟರಿ ಫೌಂಡೇಶನ್ ಸಹ ಮುಖ್ಯಸ್ಥ ಬಸವರಾಜ ಹೊಸಮನಿ ಮಾತನಾಡಿ, ‘ಕಚ್ಚಾ ವಸ್ತುಗಳ ಮರುಬಳಕೆಯಿಂದ ಪರಿಸರ ನಾಶ ತಡೆಗಟ್ಟಬಹುದು’ ಎಂದು ತಿಳಿಸಿದರು.</p>.<p>ಉನ್ನತ ಭಾರತ ಅಭಿಯಾನ ಸಂಯೋಜಕ ಚೇತನ ಜೆ. ಡಿ. ಅಧ್ಯಕ್ಷತೆ ವಹಿಸಿದ್ದರು. ಕವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಗೊರವರ್, ಪ್ರೊ. ಸಂಗೀತಾ ಮಾನೆ, ಪ್ರೊ. ಜೆ. ಎಂ. ಚಂದುನವರ, ನವೀನ ಮಿರಾಶಿ, ಕಿರಣ ಬನ್ನಿಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಮನುಷ್ಯ ಪ್ರಗತಿ ಹೆಸರಿನಲ್ಲಿ ಪರಿಸರ ನಾಶಪಡಿಸುತ್ತಿದ್ದಾನೆ. ಪರಿಸರ ಸಂರಕ್ಷಣೆಗೆ ಜನಜಾಗೃತಿ ಅಗತ್ಯವಿದೆ’ ಎಂದು ಪ್ರೊ. ಅರವಿಂದ ಮೂಲಿಮನಿ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಉನ್ನತ ಭಾರತ ಅಭಿಯಾನ ಕೋಶ ಹಾಗೂ ದಿ ಇಕೋ ಫ್ಯಾಕ್ಟರಿ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಶಾಶ್ವತ್ ಭಾರತ ಸೇತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಓಝೋನ್ ಪದರಕ್ಕೂ ಹಾಣಿಯಾಗುತ್ತಿದೆ. ಗಾಳಿ, ಆಹಾರ ಹಾಗೂ ಮಾನವ ದೇಹದಲ್ಲಿನ ರಕ್ತವೂ ಕೂಡ ವಿಷಪೂರಿತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>ದಿ ಇಕೋ ಫ್ಯಾಕ್ಟರಿ ಫೌಂಡೇಶನ್ ಸಹ ಮುಖ್ಯಸ್ಥ ಬಸವರಾಜ ಹೊಸಮನಿ ಮಾತನಾಡಿ, ‘ಕಚ್ಚಾ ವಸ್ತುಗಳ ಮರುಬಳಕೆಯಿಂದ ಪರಿಸರ ನಾಶ ತಡೆಗಟ್ಟಬಹುದು’ ಎಂದು ತಿಳಿಸಿದರು.</p>.<p>ಉನ್ನತ ಭಾರತ ಅಭಿಯಾನ ಸಂಯೋಜಕ ಚೇತನ ಜೆ. ಡಿ. ಅಧ್ಯಕ್ಷತೆ ವಹಿಸಿದ್ದರು. ಕವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಗೊರವರ್, ಪ್ರೊ. ಸಂಗೀತಾ ಮಾನೆ, ಪ್ರೊ. ಜೆ. ಎಂ. ಚಂದುನವರ, ನವೀನ ಮಿರಾಶಿ, ಕಿರಣ ಬನ್ನಿಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>