‘ರಾಜ್ಯದ ಅನೇಕ ಕಡೆಗಳಲ್ಲಿ ಸಫಾಯಿ ಕರ್ಮಚಾರಿಗಳು, ಯುಜಿಡಿ ಕೆಲಸಗಾರರು, ಟಿಪ್ಪರ್, ಲೋಡರ್ಸ್, ಕ್ಲೀನರ್ಸ್ಗಳು ಗುತ್ತಿಗೆದಾರರ ಕಪಿಮುಷ್ಠಿಯಲ್ಲಿದ್ದಾರೆ. ಗುತ್ತಿಗೆ ಪದ್ದತಿಯನ್ನು ರದ್ದು ಮಾಡಲು ಕ್ರಮ ತೆಗೆದುಕೊಳ್ಳುತ್ತೆನೆ. ಅತ್ಯಾಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳನ್ನು ಬಳಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿ ಅನುಷ್ಠಾನಗೊಳಿಸುವಂತೆ ಸೂಚಿಸಿ ಮೇಲ್ವಿಚಾರಣೆ ಮಾಡುತ್ತೇನೆ’ ಎಂದರು.