ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ವಿನಯ ಕುಲಕರ್ಣಿಗೆ ನ.23ರವರೆಗೆ ನ್ಯಾಯಾಂಗ ಬಂಧನ

Last Updated 9 ನವೆಂಬರ್ 2020, 8:25 IST
ಅಕ್ಷರ ಗಾತ್ರ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ನ.23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

2016ರ ಜೂನ್ 15 ರಂದು ನಡೆದಿದ್ದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ನ.5 ರಂದು ವಿನಯ ಅವರನ್ನು ಬಂಧಿಸಿತ್ತು.

ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಗುರುವಾರ ಆದೇಶಿಸಿತ್ತು. ಅದರಂತೆ ಹುಬ್ಬಳ್ಳಿಯಲ್ಲಿ ವಿನಯ ಕುಲಕರ್ಣಿ ಅವರ ವಿಚಾರಣೆಯನ್ನು ಸಿಬಿಐ ನಡೆಸಿತ್ತು.

ಪೊಲೀಸ್ ಬಂಧನ ಅವಧಿ ಸೋಮವಾರ ಕೊನೆಯಾಗಿದ್ದರಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ವಿನಯ ಅವರನ್ನು ಸಿಬಿಐ ಅಧಿಕಾರಿಗಳು ಹಾಜರು ಪಡಿಸಿದರು.

ಈ ವೇಳೆ ವಿನಯ ಕುಲಕರ್ಣಿ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತು.

ಇದಕ್ಕೆ ವಿನಯ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಹೀಗಾಗಿ ಇದ‌ನ್ನು ನ್ಯಾಯಾಲಯ ಮಾನ್ಯ ಮಾಡಲಿಲ್ಲ. ಅಂತಿಮವಾಗಿ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧ‌ಕ್ಕೆ ಒಪ್ಪಿಸಿ ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT