<p><strong>ಹುಬ್ಬಳ್ಳಿ: </strong>ನಗರದ ರೈಲು ನಿಲ್ದಾಣದ ಮೊದಲ ಪ್ಲಾಟ್ ಫಾರ್ಮ್ನಲ್ಲಿ ನಿಗೂಡ ವಸ್ತು ಸ್ಪೋಟಗೊಂಡು ಬುಧವಾರಕ್ಕೆ (ಅ. 21) ಒಂದು ವರ್ಷವಾದರೂ ಆರೋಪಿಗಳ ಪತ್ತೆಯಾಗಿಲ್ಲ.</p>.<p>ಸ್ಫೋಟಕ ವಸ್ತುಇದ್ದ ಪ್ಲಾಸ್ಟಿಕ್ ಬಕೆಟ್ ಮೇಲೆ ‘ನೋ ಬಿಜೆಪಿ, ನೋ ಆರ್ಎಸ್ಎಸ್’ ಎಂದು ಬರೆಯಲಾಗಿತ್ತು. ಮಹಾರಾಷ್ಟ್ರ ಶಾಸಕ ಪ್ರಕಾಶ ಅಬೀದ್ಕರ್ ಹೆಸರೂ ಇತ್ತು. ಆದ್ದರಿಂದ ಈ ಘಟನೆಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸ್ಪೋಟದಿಂದರೈಲುನಿಲ್ದಾಣದಲ್ಲಿಚಹಾ ಮಾರಾಟ ಮಾಡುತ್ತಿದ್ದ ಅರಳಿಕಟ್ಟಿ ಕಾಲೊನಿಯ ಹುಸೇನ್ ಸಾಬ್ ನಾಯಕವಾಲೆಅವರ ಬಲಗೈ ಸುಟ್ಟು ಕರಕಲಾಗಿತ್ತು.</p>.<p>ಕಡಿಮೆ ತೀವ್ರತೆಯ ಸ್ಫೋಟಕ ಹೊಂದಿದ್ದ, ಹಂದಿಗಳ ಹಾವಳಿ ತಪ್ಪಿಸಲು ಬಳಸುವ ಫೀಲ್ಡ್ ಬಾಂಬ್ ಸ್ಫೋಟವಾಗಿತ್ತು ಎನ್ನುವುದು ತನಿಖೆಯ ಬಳಿಕ ಪತ್ತೆಯಾಗಿತ್ತು. ಆದರೆ, ಘಟನೆಗೆ ಕಾರಣರಾದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಇನ್ನೂ ಆಗಿಲ್ಲ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಬೋರಲಿಂಗಯ್ಯ ‘ಸ್ಫೋಟದ ತನಿಖೆಗಾಗಿ ನಮ್ಮ ತಂಡ ಹಲವು ಬಾರಿ ಮಹಾರಾಷ್ಟ್ರಕ್ಕೆ ಹೋಗಿ ಬಂದಿದೆ. ಇನ್ನಷ್ಟು ಮಾಹಿತಿಗಳನ್ನು ಕಲೆಹಾಕುವ ಕಾರ್ಯ ನಡೆಯುತ್ತಿದೆ.ಪ್ರಕರಣದ ವಿಚಾರಣೆ ಕೈಬಿಟ್ಟಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚುವ ವಿಶ್ವಾಸವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ರೈಲು ನಿಲ್ದಾಣದ ಮೊದಲ ಪ್ಲಾಟ್ ಫಾರ್ಮ್ನಲ್ಲಿ ನಿಗೂಡ ವಸ್ತು ಸ್ಪೋಟಗೊಂಡು ಬುಧವಾರಕ್ಕೆ (ಅ. 21) ಒಂದು ವರ್ಷವಾದರೂ ಆರೋಪಿಗಳ ಪತ್ತೆಯಾಗಿಲ್ಲ.</p>.<p>ಸ್ಫೋಟಕ ವಸ್ತುಇದ್ದ ಪ್ಲಾಸ್ಟಿಕ್ ಬಕೆಟ್ ಮೇಲೆ ‘ನೋ ಬಿಜೆಪಿ, ನೋ ಆರ್ಎಸ್ಎಸ್’ ಎಂದು ಬರೆಯಲಾಗಿತ್ತು. ಮಹಾರಾಷ್ಟ್ರ ಶಾಸಕ ಪ್ರಕಾಶ ಅಬೀದ್ಕರ್ ಹೆಸರೂ ಇತ್ತು. ಆದ್ದರಿಂದ ಈ ಘಟನೆಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸ್ಪೋಟದಿಂದರೈಲುನಿಲ್ದಾಣದಲ್ಲಿಚಹಾ ಮಾರಾಟ ಮಾಡುತ್ತಿದ್ದ ಅರಳಿಕಟ್ಟಿ ಕಾಲೊನಿಯ ಹುಸೇನ್ ಸಾಬ್ ನಾಯಕವಾಲೆಅವರ ಬಲಗೈ ಸುಟ್ಟು ಕರಕಲಾಗಿತ್ತು.</p>.<p>ಕಡಿಮೆ ತೀವ್ರತೆಯ ಸ್ಫೋಟಕ ಹೊಂದಿದ್ದ, ಹಂದಿಗಳ ಹಾವಳಿ ತಪ್ಪಿಸಲು ಬಳಸುವ ಫೀಲ್ಡ್ ಬಾಂಬ್ ಸ್ಫೋಟವಾಗಿತ್ತು ಎನ್ನುವುದು ತನಿಖೆಯ ಬಳಿಕ ಪತ್ತೆಯಾಗಿತ್ತು. ಆದರೆ, ಘಟನೆಗೆ ಕಾರಣರಾದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಇನ್ನೂ ಆಗಿಲ್ಲ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಬೋರಲಿಂಗಯ್ಯ ‘ಸ್ಫೋಟದ ತನಿಖೆಗಾಗಿ ನಮ್ಮ ತಂಡ ಹಲವು ಬಾರಿ ಮಹಾರಾಷ್ಟ್ರಕ್ಕೆ ಹೋಗಿ ಬಂದಿದೆ. ಇನ್ನಷ್ಟು ಮಾಹಿತಿಗಳನ್ನು ಕಲೆಹಾಕುವ ಕಾರ್ಯ ನಡೆಯುತ್ತಿದೆ.ಪ್ರಕರಣದ ವಿಚಾರಣೆ ಕೈಬಿಟ್ಟಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚುವ ವಿಶ್ವಾಸವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>