ಶಿರಕೋಳ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ಧಾರೂಢ ಆಶ್ರಮ ಶಿರಕೋಳದ ಚಿದಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. 9ರಂದು ಬೆಳಿಗ್ಗೆ 8ಕ್ಕೆ ಗ್ರಾಮದೇವತೆಯರ ಮೂರ್ತಿಗಳು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಬರಮಾಡಿಕೊಳ್ಳಲಾಗುವುದು. ಸಂಜೆ 6ಕ್ಕೆ ಬಾಳೆಹೊನ್ನೂರಿನ ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಆಶೀರ್ವವಚನ ನೀಡಲಿದ್ದಾರೆ. 13ರಂದು ಬೆಳಿಗ್ಗೆ 8ಕ್ಕೆ ಪ್ರಾಣ ಪ್ರತಿಷ್ಠಾಪನೆ, ಚಂಡಿಕಾ ಹೋಮ, ಉಡಿತುಂಬುವ ಕಾರ್ಯಕ್ರಮ ನಡೆಯಲಿದೆ.