ಹುಬ್ಬಳ್ಳಿ: ಇಲ್ಲಿನ ನವನಗರದಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರ ಹಾಗೂ ಹಣಕಾಸು ಅಧಿಕಾರಿಗಳ ನಕಲಿ ಸಹಿ ಮಾಡಿ, ನಕಲಿ ಚೆಕ್ ಬುಕ್ ಬಳಸಿ ₹ 22.88 ಮೊತ್ತವನ್ನು ವಿಶ್ವವಿದ್ಯಾಲಯದ ಖಾತೆಯಿಂದ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ.
ಜ. 21ರಿಂದ ಫೆ. 12ರ ಅವಧಿಯಲ್ಲಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಬುಧವಾರ ನವನಗರ ಪೊಲೀಸ್ ಠಾಣೆಯಲ್ಲಿ ವಿ.ವಿ. ಸಹಾಯಕ ಕುಲಸಚಿವ ಡಾ. ರಂಗಸ್ವಾಮಿ ದೂರು ನೀಡಿದ್ದಾರೆ.
ವಂಚಕರು ದೆಹಲಿ ಮತ್ತು ಮುಂಬೈನ ಬ್ಯಾಂಕ್ಗಳಲ್ಲಿ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡಿದ್ದಾರೆ. ‘ಹಣ ವಂಚನೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬ್ಯಾಂಕ್ ಅಧಿಕಾರಿಗಳ ನೆರವಿನೊಂದಿಗೆ ತನಿಖೆ ಆರಂಭವಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ತಿಳಿಸಿದ್ದಾರೆ.