‘ಅಧಿಕಾರ ದುರುಪಯೋಗದ ಆರೋಪ ಮಾಡುತ್ತಿರುವ ಈ ಮೂವರೂ, ನಂಜಪ್ಪ ಅವರ ಬದಲಿಗೆ ಉತ್ತರ ಕರ್ನಾಟಕದವರಿಗೆ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಬೊಬ್ಬೆ ಹಾಕುತ್ತಿದ್ದಾರೆ. ಆ ಮೂಲಕ ಸಂಘವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ನಂಜಪ್ಪ ಅವರ ನೇತೃತ್ವದಲ್ಲಿ ಸಂಘ ಉತ್ತಮ ದಿಕ್ಕಿನಲ್ಲಿ ಸಾಗುತ್ತಿದೆ. ಬೆಂಗಳೂರು ಕೇಂದ್ರಿಕೃತವಾಗಿದ್ದ ಸಂಘ, ಇದೀಗ ರಾಜ್ಯವ್ಯಾಪಿಯಾಗಿದೆ. 1,500 ಸದಸ್ಯರ ಬಲ 11 ಸಾವಿರಕ್ಕೆ ಏರಿಕೆಯಾಗಿದೆ. ಅವರ ಶ್ರಮದಿಂದ ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಮಾಚಿದೇವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ಸಿಕ್ಕಿದೆ’ ಎಂದರು.