ಹುಬ್ಬಳ್ಳಿ: ‘ಕೋವಿಡ್ ಪರಿಕರಗಳನ್ನು ಪೂರೈಕೆ ಮಾಡಿದ ಹಣ ಪಾವತಿಸಲು ಎರಡು ವರ್ಷಗಳಿಂದ ಚಿಕ್ಕಮಗಳೂರು ಜಿಲ್ಲೆಯ ಅಧಿಕಾರಿಗಳು ಕಮಿಷನ್ ಬೇಡಿಕೆ ಮುಂದಿಟ್ಟು ವಿಳಂಬ ಮಾಡುತ್ತಿದ್ದಾರೆ. ಸಾಲಗಾರರ ಕಾಟ ಸಂಕಷ್ಟ ತಂದೊಡ್ಡಿದ್ದು, ಹಣ ಪಾವತಿಗೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಇಲ್ಲವೇ, ದಯಾಮರಣಕ್ಕೆ ಒಪ್ಪಿಗೆ ನೀಡಬೇಕು’ ಎಂದು ಇಲ್ಲಿನ ಶಾಂತಿನಗರದ ನಿವಾಸಿ, ಗುತ್ತಿಗೆದಾರ ಬಸವರಾಜ್ ಅಮರಗೋಳ ರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲ ಹಾಗೂ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.