ಕುಂದಗೋಳ ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದ ಬಸವರಾಜ ಯೋಗಪ್ಪನವರ ಎಂಬ ರೈತ ನಾಲ್ಕು ಎಕರೆ ಹೊಲದಲ್ಲಿ ಮೆಣಸಿನ ಗಿಡ ಬೆಳೆಸಿದ್ದು ಅತಿವೃಷ್ಟಿ ಹೊಡೆತಕ್ಕೆ ಸಿಲುಕಿದ ಬೆಳೆಗಳು ಇಳುವರಿ ಕಳೆದುಕೊಂಡಿದ್ದು ಹೊಲದ ತುಂಬೆಲ್ಲಾ ಹುಲ್ಲು ಕಸ ಬೆಳೆದಿದೆ. ಹೀಗಾಗಿ ರೂಟರ್ ಮೂಲಕ ಇಡೀ ಹೊಲವನ್ನೇ ಹರಗಿಸಿ ಕೈ ಬಿಟ್ಟಿದ್ದು, ಹಿಂಗಾರಿನ ಮೇಲೆ ಭರವಸೆ ಹೊತ್ತು ಕುಳಿತು ಸರ್ಕಾರ ನೀಡುವ ಪರಿಹಾರ ಬೆಳೆವಿಮೆಗೆ ಕಾಯುತ್ತಿದ್ದಾನೆ.