ಬೆಂಗಳೂರಿಗೆ ಹೊರಡುವ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ್ದ ರೈತರು ಸಂಕಷ್ಟದಲ್ಲಿರುವ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಅನ್ನದಾತರಲ್ಲಿ ಭೇದ– ಭಾವ ಮಾಡಬಾರದು. ಬೆಳೆ ವಿಮೆಯನ್ನು ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು. ಮಹದಾಯಿ ಹೋರಾಟ ಆರಂಭವಾಗಿ ಸಾವಿರ ದಿನಗಳೇ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಾದ ಇತ್ಯರ್ಥಪಡಿಸಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.