ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಸಾಧಾರಣ ಮಳೆ ಸುರಿದಿದ್ದು, ರೈತರಲ್ಲಿ ಸಂತಸ ಉಂಟುಮಾಡಿತು. ವಾರದಿಂದ ಮೋಡ ಕವಿದ ವಾತಾವರಣವಿದ್ದರೂ ಮಳೆ ಸುರಿದಿರಲಿಲ್ಲ. ಇದರಿಂದಾಗಿ, ಬಿತ್ತನೆ ಕೆಲಸ ಮುಗಿಸಿದ್ದ ರೈತರು ಚಿಂತೆಗೀಡಾಗಿದ್ದರು. ಅದರ ಬೆನ್ನಲ್ಲೇ, ಇಂದು ಸುರಿದ ಮಳೆಯು ರೈತರ ಮೊಗದಲ್ಲಿ ಕೊಂಚ ಸಂಭ್ರಮ ತಂದಿತು.