<p><strong>ಹುಬ್ಬಳ್ಳಿ: </strong>ನಗರದಲ್ಲಿ ಮಂಗಳವಾರ ಸಾಧಾರಣ ಮಳೆ ಸುರಿದಿದ್ದು, ರೈತರಲ್ಲಿ ಸಂತಸ ಉಂಟುಮಾಡಿತು. ವಾರದಿಂದ ಮೋಡ ಕವಿದ ವಾತಾವರಣವಿದ್ದರೂ ಮಳೆ ಸುರಿದಿರಲಿಲ್ಲ. ಇದರಿಂದಾಗಿ, ಬಿತ್ತನೆ ಕೆಲಸ ಮುಗಿಸಿದ್ದ ರೈತರು ಚಿಂತೆಗೀಡಾಗಿದ್ದರು. ಅದರ ಬೆನ್ನಲ್ಲೇ, ಇಂದು ಸುರಿದ ಮಳೆಯು ರೈತರ ಮೊಗದಲ್ಲಿ ಕೊಂಚ ಸಂಭ್ರಮ ತಂದಿತು.</p>.<p>ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ನಗರದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಜಿಟಿಜಿಟಿಯಾಗಿ ಆರಂಭಗೊಂಡ ಮಳೆಯು ನಂತರ ಕೆಲ ಹೊತ್ತು ಜೋರಾಗಿ ಸುರಿಯಿತು.</p>.<p>'ಹೊಲದಲ್ಲಿ ಜೋಳವನ್ನು ಬಿತ್ತನೆ ಮಾಡಿದ್ದೆವು. ಆದರೆ, ವಾರವಾದರೂ ಬಾರದ ಮಳೆಯಿಂದಾಗಿ ಚಿಂತೆಯಾಗಿತ್ತು. ಎಲ್ಲಿ ಬೀಜಗಳು ಒಣಗಿ ಹೋಗುತ್ತವೊ ಎಂಬ ಆತಂಕದಲ್ಲಿದ್ದೆವು. ಇದೀಗ ಮಳೆ ಬಂದಿದ್ದು ಸಮಾಧಾನ ತಂದಿದೆ' ಎಂದು ಉಣಕಲ್ನ ರೈತ ಸಿದ್ಧಯ್ಯ ಹಿರೇಮಠ ಸಂತಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/heavy-rains-alert-in-parts-of-karnataka-coastal-area-fishermen-warnings-meteorological-department-947606.html" itemprop="url">ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ </a></p>.<p>ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ನೆನೆದುಕೊಂಡು ಹೋಗುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡುಬಂತು. ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ಜನ ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದಲ್ಲಿ ಮಂಗಳವಾರ ಸಾಧಾರಣ ಮಳೆ ಸುರಿದಿದ್ದು, ರೈತರಲ್ಲಿ ಸಂತಸ ಉಂಟುಮಾಡಿತು. ವಾರದಿಂದ ಮೋಡ ಕವಿದ ವಾತಾವರಣವಿದ್ದರೂ ಮಳೆ ಸುರಿದಿರಲಿಲ್ಲ. ಇದರಿಂದಾಗಿ, ಬಿತ್ತನೆ ಕೆಲಸ ಮುಗಿಸಿದ್ದ ರೈತರು ಚಿಂತೆಗೀಡಾಗಿದ್ದರು. ಅದರ ಬೆನ್ನಲ್ಲೇ, ಇಂದು ಸುರಿದ ಮಳೆಯು ರೈತರ ಮೊಗದಲ್ಲಿ ಕೊಂಚ ಸಂಭ್ರಮ ತಂದಿತು.</p>.<p>ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ನಗರದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಜಿಟಿಜಿಟಿಯಾಗಿ ಆರಂಭಗೊಂಡ ಮಳೆಯು ನಂತರ ಕೆಲ ಹೊತ್ತು ಜೋರಾಗಿ ಸುರಿಯಿತು.</p>.<p>'ಹೊಲದಲ್ಲಿ ಜೋಳವನ್ನು ಬಿತ್ತನೆ ಮಾಡಿದ್ದೆವು. ಆದರೆ, ವಾರವಾದರೂ ಬಾರದ ಮಳೆಯಿಂದಾಗಿ ಚಿಂತೆಯಾಗಿತ್ತು. ಎಲ್ಲಿ ಬೀಜಗಳು ಒಣಗಿ ಹೋಗುತ್ತವೊ ಎಂಬ ಆತಂಕದಲ್ಲಿದ್ದೆವು. ಇದೀಗ ಮಳೆ ಬಂದಿದ್ದು ಸಮಾಧಾನ ತಂದಿದೆ' ಎಂದು ಉಣಕಲ್ನ ರೈತ ಸಿದ್ಧಯ್ಯ ಹಿರೇಮಠ ಸಂತಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/heavy-rains-alert-in-parts-of-karnataka-coastal-area-fishermen-warnings-meteorological-department-947606.html" itemprop="url">ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ </a></p>.<p>ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ನೆನೆದುಕೊಂಡು ಹೋಗುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡುಬಂತು. ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ಜನ ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>