<p><strong>ಅಣ್ಣಿಗೇರಿ</strong>: ‘ಬೆಳಿಗಳಿಗೆ ಸೂಕ್ತ ಬೆಲೆ ಕೊಡಿಸುವುದು, ಕೃಷಿ ಸಾಲಮನ್ನಾ ಮಾಡಲು ಒತ್ತಾಯಿಸುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.</p>.<p>ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಈಚೆಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡ ನೂತನ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ದಾಸೋಹ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು.</p>.<p>ಕಡಲೆ ಕಟಾವಿಗೆ ಬಂದಿದ್ದು ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯವರು ಮನವಿ ಮಾಡಿದರು.</p>.<p>ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲಪ್ಪ ದುಂದೂರ ಮಾತನಾಡಿ, ‘ಪ್ರದಾನ ಮಂತ್ರಿ ಕಿಸಾನ ಯೋಜನೆ ಲಾಭ ಹೊಸ ಖಾತೆದಾರರಿಗೂ ಅನ್ವಯಿಸಬೇಕು. ರೈತರು ಬ್ಯಾಂಕ್ನಲ್ಲಿ ಬೆಳೆ ಸಾಲ ಪಡೆಯುವಾಗ ಅಧಿಕಾರಿಗಳು ಸಿವಿಲ್ ನಿಯಮ ಸಡಿಲಿಕೆ ಮಾಡಬೇಕು’ ಎಂದರು.</p>.<p>‘ನಮ್ಮ ಹೊಲ ನಮ್ಮ ದಾರಿ’ಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಪೂಜಾರ, ನವಲಗುಂದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಾಲವಾಡ, ರಾಮನಗೌಡ್ರು ಪರ್ವತಗೌಡ್ರ ಸೇರಿದಂತೆ ಮಹಿಳಾ ರೈತ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ</strong>: ‘ಬೆಳಿಗಳಿಗೆ ಸೂಕ್ತ ಬೆಲೆ ಕೊಡಿಸುವುದು, ಕೃಷಿ ಸಾಲಮನ್ನಾ ಮಾಡಲು ಒತ್ತಾಯಿಸುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.</p>.<p>ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಈಚೆಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡ ನೂತನ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.</p>.<p>ದಾಸೋಹ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು.</p>.<p>ಕಡಲೆ ಕಟಾವಿಗೆ ಬಂದಿದ್ದು ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯವರು ಮನವಿ ಮಾಡಿದರು.</p>.<p>ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲಪ್ಪ ದುಂದೂರ ಮಾತನಾಡಿ, ‘ಪ್ರದಾನ ಮಂತ್ರಿ ಕಿಸಾನ ಯೋಜನೆ ಲಾಭ ಹೊಸ ಖಾತೆದಾರರಿಗೂ ಅನ್ವಯಿಸಬೇಕು. ರೈತರು ಬ್ಯಾಂಕ್ನಲ್ಲಿ ಬೆಳೆ ಸಾಲ ಪಡೆಯುವಾಗ ಅಧಿಕಾರಿಗಳು ಸಿವಿಲ್ ನಿಯಮ ಸಡಿಲಿಕೆ ಮಾಡಬೇಕು’ ಎಂದರು.</p>.<p>‘ನಮ್ಮ ಹೊಲ ನಮ್ಮ ದಾರಿ’ಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಪೂಜಾರ, ನವಲಗುಂದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಾಲವಾಡ, ರಾಮನಗೌಡ್ರು ಪರ್ವತಗೌಡ್ರ ಸೇರಿದಂತೆ ಮಹಿಳಾ ರೈತ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>