ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಧಾರವಾಡಕ್ಕೆ ನೂತನ ಶಿಕ್ಷಣ ಸಂಸ್ಥೆಗಳು ಬರುತ್ತಿರುವುದು ಸ್ವಾಗತಾರ್ಹ. ಆದರೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಾಕಷ್ಟು ಜಾಗ ಹಾಗೂ ಮೂಲಸೌಕರ್ಯಗಳಿದ್ದರೂ, ರೈತರ ಶ್ರೇಯೋಭಿವೃದ್ಧಿಗಾಗಿ ನಡೆಸುವ ಸಂಶೋಧನೆಗಳಿಗೆ ಮೀಸಲಿಟ್ಟಿದ್ದ ಜಾಗವನ್ನು ನೀಡಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ’ ಎಂದಿದ್ದಾರೆ.