ದಾಹ ನೀಗಿಸಿಕೊಳ್ಳಲು ಬಂದ ಜಿಂಕೆ ಮರಿಯು ಇಲ್ಲಿನ ಸತ್ತೂರಿನಲ್ಲಿರುವ ಶ್ರೀಯಾ ಕಾಲೇಜಿನ ಆವರಣದಲ್ಲಿರುವ ತೊಟ್ಟಿಗೆ ಬಿದ್ದಿದಿದೆ. ಸ್ಥಳೀಯರು ಈ ಮಾಹಿತಿಯನ್ನು ಅರಣ್ಯ ಇಲಾಖೆಗೆ ಮುಟ್ಟಿಸಿದರು. ಸ್ಥಳಕ್ಕೆ ಬಂದ ಉಪವಲಯ ಅರಣ್ಯಾಧಿಕಾರಿ ಯಲ್ಲಾನಾಯಕ ಲಮಾಣಿ, ಪ್ರಾಣಿ ಪ್ರಿಯ ಸೋಮಶೇಖರ ಚೆನ್ನಶೆಟ್ಟಿ ಹಾಗೂ ವೈದ್ಯ ಡಾ. ಸತೀಶ ಇರಕಲ್ ಅವರು ಜಿಂಕೆ ಮರಿಯನ್ನು ರಕ್ಷಿಸಿದರು.