<p><strong>ಹುಬ್ಬಳ್ಳಿ: </strong>ಪ್ರಯಾಣದ ಸಂದರ್ಭದಲ್ಲಿ ಮಗುವಿಗೆ ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ಇಲ್ಲಿನ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಹಾಲುಣಿಸುವ ಎರಡು ಕೊಠಡಿ ತೆರೆಯಲಾಗಿದೆ. ಸುರಕ್ಷಿತ ಮತ್ತು ಖಾಸಗಿ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಮೊದಲಬಾರಿಗೆ ರೈಲು ನಿಲ್ದಾಣದಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ.</p>.<p>ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್. ಕೊಠಡಿ ಸೌಲಭ್ಯಕ್ಕೆ ಚಾಲನೆ ನೀಡಿ, ‘ಮಗುವಿಗೆ ಹಾಲುಣಿಸುವ ತಾಯಂದಿರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಠಡಿ ಸೌಲಭ್ಯ ಕಲ್ಪಿಸಲಾಗಿದೆ. ಇದು ಉಚಿತ ಸೇವೆಯಾಗಿದ್ದು, ಮುಂಬರುವ ದಿನಗಳಲ್ಲಿ ಬೆಳಗಾವಿ, ಬಳ್ಳಾರಿ, ಧಾರವಾಡ, ವಾಸ್ಕೋ ಡ ಗಾಮಾ, ವಿಜಯಪುರ, ಗದಗ ಮತ್ತು ಹೊಸಪೇಟೆ ನಿಲ್ದಾಣಗಳಲ್ಲಿಯೂ ಕೊಠಡಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ’ ಎಂದರು.</p>.<p>ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್, ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ ಉಪಸ್ಥಿತರಿದ್ದರು.</p>.<p>ರೈಲು ನಿಲ್ದಾಣದ ಪ್ರವೇಶದ್ವಾರದ ಸಭಾಂಗಣ ಮತ್ತು ನಿರೀಕ್ಷಣಾ ಕೊಠಡಿಯಲ್ಲಿ ಈ ಸೌಲಭ್ಯವಿದ್ದು, ಆರಾಮದಾಯಕವಾದ ಕುಷನ್ ಆಸನಗಳು, ಫ್ಯಾನ್, ವಿದ್ಯುದ್ದೀಪಗಳು, ವೆಂಟಿಲೇಷನ್, ಚಾರ್ಜಿಂಗ್ ಪಾಯಿಂಟ್, ಡೈಪರ್ ಬದಲಿಸುವ ವ್ಯವಸ್ಥೆ, ಡಸ್ಟ್ ಬಿನ್ಗಳನ್ನು ಒದಗಿಸಲಾಗಿದೆ. ಮೆ. ಬುಲ್ಸ್ ಐ ಮೀಡಿಯಾ ಪ್ರೈ.ಲಿ. ಕಂಪನಿ ರೈಲ್ವೆ ಇಲಾಖೆಗೆ ಈ ಸೌಲಭ್ಯ ಉಚಿತವಾಗಿ ಒದಗಿಸಿದ್ದು, ನಿರ್ವಹಣೆಯನ್ನೂ ಅದೇ ನೋಡಿಕೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಪ್ರಯಾಣದ ಸಂದರ್ಭದಲ್ಲಿ ಮಗುವಿಗೆ ಹಾಲುಣಿಸುವ ತಾಯಂದಿರ ಅನುಕೂಲಕ್ಕಾಗಿ ಇಲ್ಲಿನ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಹಾಲುಣಿಸುವ ಎರಡು ಕೊಠಡಿ ತೆರೆಯಲಾಗಿದೆ. ಸುರಕ್ಷಿತ ಮತ್ತು ಖಾಸಗಿ ಸ್ಥಳಾವಕಾಶ ಒದಗಿಸುವ ನಿಟ್ಟಿನಲ್ಲಿ ಮೊದಲಬಾರಿಗೆ ರೈಲು ನಿಲ್ದಾಣದಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ.</p>.<p>ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್. ಕೊಠಡಿ ಸೌಲಭ್ಯಕ್ಕೆ ಚಾಲನೆ ನೀಡಿ, ‘ಮಗುವಿಗೆ ಹಾಲುಣಿಸುವ ತಾಯಂದಿರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಠಡಿ ಸೌಲಭ್ಯ ಕಲ್ಪಿಸಲಾಗಿದೆ. ಇದು ಉಚಿತ ಸೇವೆಯಾಗಿದ್ದು, ಮುಂಬರುವ ದಿನಗಳಲ್ಲಿ ಬೆಳಗಾವಿ, ಬಳ್ಳಾರಿ, ಧಾರವಾಡ, ವಾಸ್ಕೋ ಡ ಗಾಮಾ, ವಿಜಯಪುರ, ಗದಗ ಮತ್ತು ಹೊಸಪೇಟೆ ನಿಲ್ದಾಣಗಳಲ್ಲಿಯೂ ಕೊಠಡಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ’ ಎಂದರು.</p>.<p>ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್, ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ ಉಪಸ್ಥಿತರಿದ್ದರು.</p>.<p>ರೈಲು ನಿಲ್ದಾಣದ ಪ್ರವೇಶದ್ವಾರದ ಸಭಾಂಗಣ ಮತ್ತು ನಿರೀಕ್ಷಣಾ ಕೊಠಡಿಯಲ್ಲಿ ಈ ಸೌಲಭ್ಯವಿದ್ದು, ಆರಾಮದಾಯಕವಾದ ಕುಷನ್ ಆಸನಗಳು, ಫ್ಯಾನ್, ವಿದ್ಯುದ್ದೀಪಗಳು, ವೆಂಟಿಲೇಷನ್, ಚಾರ್ಜಿಂಗ್ ಪಾಯಿಂಟ್, ಡೈಪರ್ ಬದಲಿಸುವ ವ್ಯವಸ್ಥೆ, ಡಸ್ಟ್ ಬಿನ್ಗಳನ್ನು ಒದಗಿಸಲಾಗಿದೆ. ಮೆ. ಬುಲ್ಸ್ ಐ ಮೀಡಿಯಾ ಪ್ರೈ.ಲಿ. ಕಂಪನಿ ರೈಲ್ವೆ ಇಲಾಖೆಗೆ ಈ ಸೌಲಭ್ಯ ಉಚಿತವಾಗಿ ಒದಗಿಸಿದ್ದು, ನಿರ್ವಹಣೆಯನ್ನೂ ಅದೇ ನೋಡಿಕೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>