‘ಸಾಗರ ಹಿರೇಮನಿ ಅಧ್ಯಕ್ಷರಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಪಕ್ಷದ ಮುಖಂಡರ ಸರ್ವಾನುಮತಿಯಿಲ್ಲದೆ ಅವರನ್ನು ಕೆಳಗಿಳಿಸಿ, ರಜತ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಇದು ಮಾದಿಗ ಸಮಾಜಕ್ಕೆ ಮಾಡಿದ ಅನ್ಯಾಯ. ಜಿಲ್ಲಾ ಘಟಕದ ಅಧ್ಯಕ್ಷರು ಎಲ್ಲದಕ್ಕೂ ತಲೆ ಅಲ್ಲಾಡಿಸುತ್ತಾರೆ. ರಜತ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸದಿದ್ದರೆ ಮಾದಿಗ, ವೀರಶೈವ ಹಾಗೂ ಲಿಂಗಾಯತ ಸಮಾಜದ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ’ ಎಂದರು.