<p><strong>ಹುಬ್ಬಳ್ಳಿ:</strong> ‘ಕೇತಗಾನಹಳ್ಳಿಯಲ್ಲಿ 14 ಎಕರೆಯಲ್ಲ, 71 ಎಕರೆ ಜಮೀನು ಒತ್ತುವರಿಯಾಗಿದೆ. ಇದನ್ನು ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.</p>.<p>‘ಒತ್ತುವರಿದಾರರ ಜೊತೆಗೆ ಶಾಮೀಲಾದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು. ವಶಪಡಿಸಿಕೊಂಡ ಗೋಮಾಳ ಜಮೀನನ್ನು ಪುನಃ ಗೋಮಾಳವಾಗಿ ಪರಿವರ್ತಿಸಬೇಕು. ನ್ಯಾಯಾಲಯಕ್ಕೆ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್ಡಿ) ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದೆಹಲಿಯ ಗಾಂಧಿಶಾಂತಿ ಪ್ರತಿಷ್ಠಾನದಲ್ಲಿ ಏಪ್ರಿಲ್ 19 ರಿಂದ 20ರವರೆಗೆ ನಡೆಯಲಿದೆ. ನ್ಯಾಯಮೂರ್ತಿ ಮದನ್ ಎಂ. ಲೋಕುರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರಡು ದಿನ ವಿವಿಧ ಗೋಷ್ಠಿಗಳು ನಡೆಯಲಿವೆ’ ಎಂದರು.</p>.<p>‘ಜೆಎನ್ಯು ಪ್ರೊ. ಆನಂದ ಕುಮಾರ್, ಪ್ರೊ. ಜಗದೀಪ್ ಚೊಕ್ಕರ್, ಅರ್ಥಶಾಸ್ತ್ರಜ್ಞ ಅರುಣಕುಮಾರ ಸೇರಿ ಸಿಎಫ್ಡಿ ಪದಾಧಿಕಾರಿಗಳು ಮಾತನಾಡುವರು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕೇತಗಾನಹಳ್ಳಿಯಲ್ಲಿ 14 ಎಕರೆಯಲ್ಲ, 71 ಎಕರೆ ಜಮೀನು ಒತ್ತುವರಿಯಾಗಿದೆ. ಇದನ್ನು ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.</p>.<p>‘ಒತ್ತುವರಿದಾರರ ಜೊತೆಗೆ ಶಾಮೀಲಾದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು. ವಶಪಡಿಸಿಕೊಂಡ ಗೋಮಾಳ ಜಮೀನನ್ನು ಪುನಃ ಗೋಮಾಳವಾಗಿ ಪರಿವರ್ತಿಸಬೇಕು. ನ್ಯಾಯಾಲಯಕ್ಕೆ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್ಡಿ) ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದೆಹಲಿಯ ಗಾಂಧಿಶಾಂತಿ ಪ್ರತಿಷ್ಠಾನದಲ್ಲಿ ಏಪ್ರಿಲ್ 19 ರಿಂದ 20ರವರೆಗೆ ನಡೆಯಲಿದೆ. ನ್ಯಾಯಮೂರ್ತಿ ಮದನ್ ಎಂ. ಲೋಕುರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರಡು ದಿನ ವಿವಿಧ ಗೋಷ್ಠಿಗಳು ನಡೆಯಲಿವೆ’ ಎಂದರು.</p>.<p>‘ಜೆಎನ್ಯು ಪ್ರೊ. ಆನಂದ ಕುಮಾರ್, ಪ್ರೊ. ಜಗದೀಪ್ ಚೊಕ್ಕರ್, ಅರ್ಥಶಾಸ್ತ್ರಜ್ಞ ಅರುಣಕುಮಾರ ಸೇರಿ ಸಿಎಫ್ಡಿ ಪದಾಧಿಕಾರಿಗಳು ಮಾತನಾಡುವರು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>