ವಿಶೇಷ ರೈಲು 10 ವಿಪಿಎಚ್ (ಅಧಿಕ ಸಾಮರ್ಥ್ಯದ ಪಾರ್ಸಲ್ ವ್ಯಾನ್) ಹೊಂದಿದೆ. ಮೈಸೂರು, ಹಾಸನ, ಅರಸೀಕೆರೆ, ದಾವಣಗೆರೆ, ಹುಬ್ಬಳ್ಳಿ, ಲೋಂಡಾ, ಬೆಳಗಾವಿ, ಮೀರಜ್, ಪುಣೆ, ಮನ್ಮಾಡ್, ಭೂಸಾವಾಲ್, ಇಟಾರ್ಸಿ, ಭೋಪಾಲ್, ಝಾನ್ಸಿ, ಆಗ್ರಾ ಕಂಟೋನ್ಮೆಂಟ್ ಮತ್ತು ಮಥುರಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ಎಲ್ಲ ನಿಲ್ದಾಣಗಳಲ್ಲಿ ಸರಕು ಲೋಡ್ ಮತ್ತು ಅನ್ಲೋಡ್ ಮಾಡಲು ಅವಕಾಶವಿದೆ. ರೈತರು ತಮ್ಮ ಸರಕುಗಳಿಗೆ ಸೂಕ್ತ ಬೆಲೆ ಪಡೆಯಲು ಹೊಸ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರೈಲ್ವೆ ಇಲಾಖೆ ಕೋರಿದೆ.